Monday, February 2, 2026
Monday, February 2, 2026

ನ 1 ರಿಂದ ಆಸ್ತಿ ನೋಂದಣಿ ಕೇವಲ ಐದೇ ನಿಮಷದಲ್ಲಿ- ಅಶೋಕ್

Date:

ಆಸ್ತಿ ನೋಂದಣಿಗಾಗಿ ಜನ ಅಲೆಯುವುದನ್ನು ತಪ್ಪಿಸಲು ಕೇವಲ ಐದೇ ನಿಮಿಷಗಳ ನೋಂದಣಿ ಪದ್ಧತಿಯನ್ನು ಜಾರಿಗೊಳಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಸ್ತಿನೋಂದಣಿಗಾಗಿ ರಾಜ್ಯಾದ್ಯಂತ ಜನರ ಅಲೆದಾಟ ನಡೆಯುತ್ತಲೇ ಇದ್ದು ಇದನ್ನು ತಪ್ಪಿಸಲು ಕಾವೇರಿ-2 ಎಂಬ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದರು.

ಇನ್ನು ಮುಂದೆ ಆಸ್ತಿ ನೋಂದಣಿ ಮಾಡಿಸಲು ಜನ ಉಪನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಡಬೇಕಿಲ್ಲ. ಬದಲಿಗೆ ಮನೆಯಲ್ಲಿ ಕುಳಿತೇ ಆನ್​ಲೈನ್ ಮೂಲಕ ಆಸ್ತಿ ನೋಂದಣಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯ ಜತೆ ದಾಖಲೆ ಸಲ್ಲಿಸಿದರೆ ಉಪನೋಂದಣಾಧಿಕಾರಿಗಳು ಅದನ್ನು ಪರಿಶೀಲಿಸುತ್ತಾರೆ. ಅದರಲ್ಲಿ ಏನಾದರೂ ಕೊರತೆ ಇದ್ದರೆ, ತಪ್ಪಿದ್ದರೆ ಅರ್ಜಿದಾರರಿಗೆ ತಿಳಿಸುತ್ತಾರೆ ಎಂದು ವಿವರಿಸಿದರು.

ನಂತರ ಸದರಿ ದಾಖಲೆ ಪತ್ರದ ನೋಂದಣಿಗೆ ಸಮಯಾವಕಾಶವನ್ನು ನಿಗದಿಗೊಳಿಸಲಾಗುತ್ತದೆ. ಹೀಗೆ ನಿಗದಿ ಮಾಡಿದ ಸಮಯಕ್ಕೆ ಸರಿಯಾಗಿ ಅರ್ಜಿದಾರರು ಹೋದರೆ ಅವರ ಹೆಬ್ಬೆಟ್ಟು ಗುರುತು ಮತ್ತು ಸಹಿ ಪಡೆದು ನೋಂದಣಿ ಪ್ರಕ್ರಿಯೆಯನ್ನು ಐದೇ ನಿಮಿಷಗಳಲ್ಲಿ ಪೂರ್ಣಗೊಳಿಸಲಾಗುತ್ತದೆ.

ಇದೇ ನವೆಂಬರ್ 1 ರಿಂದ ಜಾರಿಗೊಳಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...