Tuesday, May 5, 2026
Tuesday, May 5, 2026

ಈಗಲೇ ಎಲ್ ಕೆಜಿ ಪ್ರವೇಶ: ಅನುಮತಿ ಇಲ್ಲ.

Date:

ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿ ಮಾರ್ಗಸೂಚಿ ಹೊರಡಿಸಿದೆ. ಕೋವಿಡ್ -19 ನಿಂದಾಗಿ ಕಳೆದ ಒಂದುವರೆ ವರ್ಷದಿಂದ ಮಕ್ಕಳು ಶಾಲೆಗಳಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಹಂತ-ಹಂತವಾಗಿ ಶಾಲೆಗಳ ತರಗತಿಯನ್ನು ಪ್ರಾರಂಭಿಸುತ್ತಿದೆ ಈಗ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದೆ. ಹೀಗಾಗಿ ಎಲ್ ಕೆಜಿ ಮತ್ತು ಯುಕೆಜಿ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸರ್ಕಾರದ ಬಳಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಮಾಂಟೆಸ್ಸರಿಗಳು ಒತ್ತಾಯಿಸಿವೆ.

ಕೋವಿಡ್ -19 ನಿಂದ ಅಂಗನವಾಡಿ ಕೇಂದ್ರಗಳು ಫಲಾನುಭವಿಗಳ ಮನೆ ಬಾಗಿಲಿಗೆ ಪೂರಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿತ್ತು. ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಮುಖವಾದರಿಂದ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಆರಂಭಗೊಳಿಸಲಿದೆ.

ರಾಜ್ಯದಲ್ಲಿ ಈಗಾಗಲೇ 1ರಿಂದ 10 ತರಗತಿಯ ಆರಂಭಗೊಂಡಿವೆ. ” ಮಕ್ಕಳು ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಮಾತೃಭಾಷೆಯಲ್ಲಿ ಅಕ್ಷರಭ್ಯಾಸ, ಭಾಷಾ ಕಲಿಕೆ, ಬಣ್ಣ, ವಸ್ತುಗಳ ಆಕಾರ ಗುರುತಿಸುವುದು, ಸಂಖ್ಯೆಗಳಲ್ಲಿ ಪರಿಣಿತಿ ಹೊಂದಿದ ಬಳಿಕವಷ್ಟೇ ಪ್ರಾರ್ಥಮಿಕ ತರಗತಿಗಳಲ್ಲಿ ಉತ್ತಮವಾಗಿ ಕಲಿಯಲು ಸಾಧ್ಯ. ಪ್ರತಿವರ್ಷ ಸುಮಾರು 25 ಲಕ್ಷಕ್ಕೂ ಹೆಚ್ಚು ಮಕ್ಕಳು ಎಲ್ ಕೆಜಿ ತರಗತಿಗಳಿಗೆ ಸೇರುತ್ತಿದ್ದರು. ಆದರೆ ಲಾಕ್ಡೌನ್ ನಿಂದ ಶಾಲೆಗಳು ಮುಚ್ಚಿದ್ದ ಪರಿಣಾಮ ಪೂರ್ವ ಪ್ರಾರ್ಥಮಿಕ ಶಾಲೆಗಳಿಗೆ ಸಮರ್ಪಕವಾಗಿ ದಾಖಲಾತಿ ನಡೆದಿಲ್ಲ. ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳ ಮಕ್ಕಳ ವಯಸ್ಸು ಒಂದೇ ಆಗಿದೆ. ಆದ್ದರಿಂದ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳ ಆರಂಭಕ್ಕೆ ಅನುಮತಿ ನೀಡಿ” ಎಂದು ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...