Friday, August 14, 2026
Friday, August 14, 2026

ವಿದ್ಯುತ್ ತಿದ್ದುಪಡಿ ಕಾಯಿದೆ ರೈತ ವಿರೋಧಿ-ಬಸವ ರಾಜಪ್ಪ

Date:

ರೈತರ ಗ್ರಾಹಕರ ವಿರೋಧಿ ವಿದ್ಯುತ್ ತಿದ್ದುಪಡಿ ಮಸೂದೆ ಕಾಯ್ದೆಯನ್ನ ಜಾರಿಗೆ ತರಬಾರದು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಎಲ್ಲಾ ತಾಲೂಕು ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ತಿಳಿಸಿದರು.

ಮೀಡಿಯಾ ಹೌಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಸವರಾಜಪ್ಪನವರು, ಕೇಂದ್ರ ಸರ್ಕಾರ 3 ರೈತ ವಿರೋಧಿ ಕೃಷಿ ಕಾಯ್ದೆಯನ್ನ ಜಾರಿಗೊಳಿಸಲು ಹೊರಟಿತ್ತು. ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ 1 ವರ್ಷ 4 ತಿಂಗಳು ರೈತರ ಧೀರ್ಘಕಾಲದ ಪ್ರತಿಭಟನೆ ನಡೆಸಿತ್ತು. ಪರಿಣಾಮ ವಾಪಾಸ್ ಪಡೆಯಲಾಯಿತು.

ವಿದ್ಯುತ್ ಸಂಸ್ಥೆಯನ್ನ ಖಾಸಗಿ ಕರಣವಾದರೆ ಮೊಬೈಲ್ ಸಿಮ್ಸ್ ಗೆ ರೀಚಾರ್ಜ್ ಮಾಡಿದ ರೀತಿಯಲ್ಲಿ ಮಾಡಲು ಹೊರಟಿದೆ. ಈ ಬಿಲ್ ಜಾರಿಯಾದರೆ ಮತ್ತೆ 14 ತಿಂಗಳ ಪ್ರತಿಭಟನೆ ನಡೆಯಲಿದೆ. ಸೆ.12 ರಂದು ಈ ಬಿಲ್ ವಿರೋಧಿಸಿ ರೈತ ಸಂಘ ಪ್ರತಿಭಟನೆ ನಡೆಸಲಿದೆ ಎಂದರು.

ರೈತರ, ಜನಸಾಮಾನ್ಯರ ವಿರೋಧಿ ಕಾಯ್ದೆಯಂತಹ ವಿದ್ಯುತ್ ಖಾಸಗೀಕರಣ ಕಾಯ್ದೆಯನ್ನ ಜಾರಿಗೆ ತರುವುದಿಲ್ಲವೆಂದು ಕೇಂದ್ರ ಸರ್ಕಾರ ರೈತ ಮುಖಂಡರಿಗೆ ಆಶ್ವಾಸನೆ ನೀಡಲಾಯಿತು. ಆದರೆ ಈಗ ಲೋಕ ಸಭೆಯಲ್ಲಿ ವಿದ್ಯುತ್ ತಿದ್ದುಪಡಿ ಮಸೂದೆಯನ್ನ ಮಂಡಿಸಿ ಸ್ಥಾಯಿ ಸಮಿತಿ ಒಪ್ಪಿಸಿ ಈ ಜಾರಿಗೆ ತರಲು ಹೊರಟಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...