Wednesday, May 6, 2026
Wednesday, May 6, 2026

ಮೊಬೈಲ್ ಚಟ ಬಿಡು ಎಂದ ಪೋಷಕರ ಮಾತಿಗೆ ಜೀವವನ್ನೇ ಬಿಟ್ಟ ಮಗ

Date:

ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಭದ್ರಾವತಿಯ ಎಚ್.ಕೆ. ಜಂಕ್ಷನ್‌ನ ಯಶವಂತ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದಾನೆ.

ಯಶವಂತ್ ಆರ್.ಪ್ರಾಜೆಕ್ಟ್ ನಲ್ಲಿರುವ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ. ಕರೊನಾ ಸಂದರ್ಭದಲ್ಲಿ ಆನ್‌ಲೈನ್ ತರಗತಿಗಾಗಿ ಯಶವಂತನಿಗೆ ಪಾಲಕರು ಮೊಬೈಲ್ ಕೊಡಿಸಿದ್ದರು. ಇದೀಗ ರೆಗ್ಯುಲರ್ ತರಗತಿಗಳು ನಡೆಯುತ್ತಿದ್ದರೂ ಕಾಲೇಜಿನಿಂದ ಮನೆಗೆ ಬಂದಾಗ ಯಶವಂತ್ ಮೊಬೈಲ್ ಹಿಡಿದುಕೊಂಡಿರುತ್ತಿದ್ದ.

ಮೊಬೈಲ್ ಹೆಚ್ಚಾಗಿ ಬಳಸಬೇಡ ಎಂದು ತಂದೆ ಸುರೇಶ್ ಯಶವಂತ್‌ಗೆ ಬುದ್ಧಿಮಾತು ಹೇಳಿದ್ದರು. ಇಷ್ಟಕ್ಕೆ ಬೇಸರಗೊಂಡ ಯಶವಂತ್ ಸೆ.3ರಂದು ಕಾಲೇಜಿಗೆ ಹೋಗುವುದಾಗಿ ಹೇಳಿ ಹೋಗಿದ್ದಾನೆ. ಮನೆಗೆ ವಾಪಸ್ ಬಂದಿರಲಿಲ್ಲ. ಈ ಬಗ್ಗೆ ಸುರೇಶ್ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಆದರೆ ಗುರುವಾರ ಎಚ್.ಕೆ.ಜಂಕ್ಷನ್ ಬಳಿಯ ಭದ್ರಾ ನಾಲೆಯಲ್ಲಿ ಯಶವಂತ್ ಮೃತದೇಹ ಪತ್ತೆಯಾಗಿದೆ. ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...