Wednesday, December 17, 2025
Wednesday, December 17, 2025

ಪೋಲಿಸ್ ಸಿಬ್ಬಂದಿ ರಾತ್ರಿ ಪ್ರಯಾಣ ನಿರ್ಬಂಧ ಆದೇಶ

Date:

ಇತ್ತೀಚಿಗೆ ಆಂಧ್ರಪ್ರದೇಶದ ಚಿತ್ತೂರು ಬಳಿಯಲ್ಲಿ ಗಾಂಜಾ ಗ್ಯಾಂಗ್ ನ ಮೇಲೆ ದಾಳಿಯ ವೇಳೆಯಲ್ಲಿ ಪೊಲೀಸರ ಕಾರು ಅಪಘಾತಗೊಂಡಿತ್ತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ 3ಜನ ಸಾವನ್ನಪ್ಪಿದ್ದರು.

ಈ ನಂತರ ಎಚ್ಚೆತ್ತುಕೊಂಡಿರುವಂತ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ಡಿಜಿಪಿ ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆ ಸೇರಿದಂತೆ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತ್ರ, ಸುರಕ್ಷತೆಯ ದೃಷ್ಠಿಯಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ತಿಳಿಸಲಾಗಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಮಾಹಿತಿ ಪ್ರಕಾರ ದೇಶದಲ್ಲಿ 2021ರಲ್ಲಿ ವಿವಿಧ ದರ್ಜೆಯ 427 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ರಾತ್ರಿ ಪ್ರಯಾಣದ ವೇಳೆಯಲ್ಲಿ ಅಪಘಾತಗಳಿಂದಾಗಿ ಸಾವನ್ನಪ್ಪಿದ್ದಾರೆ.
ಕರ್ನಾಟಕದಲ್ಲಿ 4 ಜನ ಮೃತಪಟ್ಟಿದ್ದರೇ, 25 ಮಂದಿ ರಾತ್ರಿ ಕರ್ತವ್ಯದ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿಸಲಾಗಿದೆ.

ಈ ಹಿನ್ನಲೆಯಲ್ಲಿಯೇ ಪೊಲೀಸರ ಹಿತದೃಷ್ಠಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸಿ, ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...