Tuesday, February 3, 2026
Tuesday, February 3, 2026

ರಾಣಿ ಎಲಿಜಬೆತ್2 ನಿಧನ ಪ್ರಯುಕ್ತ ದೇಶದಾದ್ಯಂತ ಸೆ,11 ಶೋಕಾಚರಣೆ

Date:

ಬ್ರಿಟನ್‌ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ 2ನೇ ಎಲಿಜಬೆತ್ (96) ನಿಧನ ಹಿನ್ನೆಲೆಯಲ್ಲಿ ದೇಶದಲ್ಲಿ ಶೋಕಾಚರಣೆ ಘೋಷಿಸಲಾಗಿದ್ದು, ಎಲಿಜಬೆತ್‌ ಅವರ ಅಂತ್ಯಸಂಸ್ಕಾರದ ನಂತರವೂ ಏಳು ದಿನಗಳವರೆಗೆ ರಾಜಮನೆತನದಲ್ಲಿ ಶೋಕಾಚರಣೆ ಇರಲಿದೆ ಎಂದು ಬಕ್ಕಿಂಗ್‌ ಹ್ಯಾಮ್ ಅರಮನೆಯು ಪ್ರಕಟಿಸಿದೆ.

ಗುರುವಾರ ರಾತ್ರಿ ನಿಧನರಾದ ರಾಣಿ 2ನೇ ಎಲಿಜಬೆತ್‌ ಅವರ ಅಂತ್ಯಸಂಸ್ಕಾರ ಇದೇ 19ರಂದು ಕೇಂದ್ರ ಲಂಡನ್‌ನ ವೆಸ್ಟ್‌ಮಿನಿಸ್ಟರ್‌ ಅಬೆನಲ್ಲಿ ನಡೆಯುವ ನಿರೀಕ್ಷೆ ಇದೆ.
ಅಂತ್ಯಕ್ರಿಯೆ ದಿನ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಲಿದೆ.

2ನೇ ಎಲಿಜಬೆತ್‌ ಅವರ ಸ್ಮರಣಾರ್ಥ ಶುಕ್ರವಾರ ಬ್ರಿಟನ್‌ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಯಿತು. ಸಂಸದರು ರಾಣಿಗೆ ಗೌರವ ನಮನ ಸಲ್ಲಿಸಿದರು. ಎರಡು ದಿನಗಳ ಕಾಲ ಈ ವಿಶೇಷ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ.

ರಾಣಿಯ ಗೌರವಾರ್ಥ ಅವರ ಜೀವಮಾನದ ಪ್ರತಿ ವರ್ಷಕ್ಕೆ ಒಂದು ಸುತ್ತು ಗುಂಡಿನಂತೆ, 96 ಸುತ್ತು ಗುಂಡುಗಳನ್ನು ಗಾಳಿಯಲ್ಲಿ ಹಾರಿಸಿ ಕೇಂದ್ರ ಲಂಡನ್‌ನಲ್ಲಿ ‘ಗನ್ ಸೆಲ್ಯೂಟ್’ ಸಲ್ಲಿಸಲಾಯಿತು.

ಚರ್ಚ್‌ಗಳಲ್ಲೂ ಗಂಟೆಗಳನ್ನು ಬಾರಿಸುವ ಮೂಲಕ ರಾಣಿಗೆ ನಮನ ಸಲ್ಲಿಸಲಾಗುತ್ತಿದೆ. ಈ ಸಂಬಂಧ ದಿ ಚರ್ಚ್‌ ಆಫ್‌ ಇಂಗ್ಲೆಂಡ್ ಪಾದ್ರಿಗಳಿಗೆ ಮಾರ್ಗಸೂಚಿ ನೀಡಿದೆ.

ರಾಣಿ 2ನೇ ಎಲಿಜಬೆತ್ ಅವರ ಗೌರವಾರ್ಥ ಸೆ.11ರಂದು ಭಾರತದಾದ್ಯಂತ ಶೋಕಾಚರಣೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

‘ಈ ಅವಧಿಯಲ್ಲಿ ದೇಶದಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಇಳಿಸಲಾಗುವುದು. ಯಾವುದೇ ಮನರಂಜನಾ ಕಾರ್ಯಕ್ರಮ ನಡೆಯುವುದಿಲ್ಲ’ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಚಾರ್ಲ್ಸ್‌ ಮುಂದಿನ ರಾಜ
3ನೇ ಚಾರ್ಲ್ಸ್‌ ಅವರನ್ನು ಬ್ರಿಟನ್‌ ರಾಜನಾಗಿ ಶನಿವಾರ ಬೆಳಿಗ್ಗೆ ಅಕ್ಸೆಶನ್ ಕೌನ್ಸಿಲ್‌ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಬಕ್ಕಿಂಗ್‌ಹ್ಯಾಮ್ ಅರಮನೆ ತಿಳಿಸಿದೆ.

ರಾಣಿ 2ನೇ ಎಲಿಜಬೆತ್‌ ಅವರ ಉತ್ತರಾಧಿಕಾರ ಮೇಲ್ವಿಚಾರಣೆಯ ಔಪಚಾರಿಕ ಸಂಸ್ಥೆಯು ಬೆಳಿಗ್ಗೆ 10ರಿಂದ ಸಭೆ ಸೇರಲಿದೆ. ನಂತರ ಲಂಡನ್‌ನ ಸೇಂಟ್ ಜೇಮ್ಸ್ ಅರಮನೆಯ ಬಾಲ್ಕನಿಯಿಂದ ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಘೋಷಣೆ ಹೊರಬೀಳಲಿದೆ ಎಂದು ತಿಳಿಸಿದೆ.

ಚಾರ್ಲ್ಸ್‌ ಭಾರತ ಮತ್ತು ಇಲ್ಲಿನ ಪುರಾತನ ಯೋಗ, ಆಯುರ್ವೇದದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ.

ರಾಜಕುಮಾರರಾಗಿದ್ದ ಅವಧಿಯಲ್ಲಿ ಹಲವು ಬಾರಿ ಭಾರತಕ್ಕೆ ಭೇಟಿ ನೀಡಿ, ದೇಶದ ಬಗ್ಗೆ ಪ್ರೀತಿಯ ಮಾತನಾಡಿದ್ದಾರೆ. 2007ರಲ್ಲಿ ಅವರು ಸ್ಥಾಪಿಸಿದ ಬ್ರಿಟಿಷ್ ಏಷ್ಯನ್ ಟ್ರಸ್ಟ್ ಮೂಲಕ ಭಾರತಕ್ಕೆ ಸಹಾಯಹಸ್ತ ಚಾಚಿದ್ದಾರೆ. ಕೋವಿಡ್‌ ಸಮಯದಲ್ಲೂ ಭಾರತಕ್ಕೆ ನೆರವಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...