Wednesday, May 6, 2026
Wednesday, May 6, 2026

ಕೋಹಿನೂರ್ ಭಾರತಕ್ಕೆ ಮರಳಿ ತರಲು ಸಾಧ್ಯವೆ

Date:

ಬ್ರಿಟನ್‌ನ ದೀರ್ಘಾವಧಿ ಆಡಳಿತ ನಡೆಸದ ​​ರಾಣಿ ಎಲಿಜಬೆತ್ 2ರ ಮರಣವು ಕೊಹಿನೂರ್ ವಜ್ರವನ್ನು ಭಾರತಕ್ಕೆ ಹಿಂದಿರುಗಿಸುವ ಬೇಡಿಕೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.

105.6 ಕ್ಯಾರೆಟ್‌ನ ಅದ್ಭುತವಾದ ನೀಲಿ ಬೆಳಕಿನ ವಜ್ರವು ಈಗ ಕಿರೀಟದಲ್ಲಿರುವ ವಜ್ರಗಳಲ್ಲಿ ಒಂದಾಗಿದೆ. ನೀಲಮಣಿಗಳು ಮತ್ತು ಇತರ ಬೆಲೆಬಾಳುವ ಕಲ್ಲುಗಳು 1937ರಲ್ಲಿ ವಿನ್ಯಾಸಗೊಳಿಸಲಾದ ಬ್ರಿಟಿಷ್ ರಾಣಿಯ ಕಿರೀಟದಲ್ಲಿ ಸೇರಿದೆ.

ಸಾಂಪ್ರದಾಯಿಕ ಕಿರೀಟವು ಈಗ ರಾಣಿ ಕ್ಯಾಮಿಲ್ಲಾ ಅವರಿಗೆ ಸೇರುತ್ತದೆ ಎಂದು ವರದಿಯಾಗಿದೆ. ಮೂರನೇ ಕಿಂಗ್ ಚಾರ್ಲ್ಸ್ ಅವರ ಪಟ್ಟಾಭಿಷೇಕದ ಸಮಯದಲ್ಲಿ ಕಿರೀಟವನ್ನು ರಾಣಿ ಕ್ಯಾಮಿಲ್ಲಾ ಅವರಿಗೆ ಅಭಿಷೇಕಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಆದರೆ ಕೆಲವು ಟ್ವಿಟ್ಟರ್ ಬಳಕೆದಾರರು ಕೊಹಿನೂರ್ ವಜ್ರದ ವಾಪಸಾತಿಗೆ ಸಂಬಂಧಿಸಿದಂತೆ ಕೆಲವು ಗಂಭೀರವಾದ ಮನವಿಗಳನ್ನು ಈಗ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಕೆಲವರು ವ್ಯಂಗ್ಯವನ್ನು ಮಾಡಿದ್ದಾರೆ. ಹೃತಿಕ್ ರೋಷನ್ ಪಾತ್ರವು ಚಲಿಸುವ ರೈಲಿನಿಂದ ವಜ್ರವನ್ನು ಹಿಡಿಯುವ ಬಾಲಿವುಡ್ ಚಿತ್ರ ‘ಧೂಮ್ 2’ ನ ದೃಶ್ಯವನ್ನು ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದಾರೆ.

ನಮ್ಮ ಹೀರಾ, ಮೋತಿ, ಕೊಹಿನೂರ್ ವಜ್ರವನ್ನು ಬ್ರಿಟಿಷ್ ಮ್ಯೂಸಿಯಂನಿಂದ ಭಾರತಕ್ಕೆ ಮರುಪಡೆಯಲು ಹೃತಿಕ್ ರೋಷನ್ ಹಿಂತಿರುಗಿದ್ದಾರೆ ಎಂದು ಬಳಕೆದಾರರು ಪೋಸ್ಟ್‌ನ ಭಾಗವಾಗಿ ಬರೆದುಕೊಂಡಿದ್ದಾರೆ.

ಇನ್ನೊರ್ವ ಟ್ವಿಟ್ಟರ್ ಬಳಕೆದಾರರು ರಾಣಿ ವಸಾಹತುಶಾಹಿಯಲ್ಲಿ ಸಕ್ರಿಯ ಪಾಲ್ಗೊಳ್ಳುವವರು. ಈಗ ನಾವು ನಮ್ಮ ಕೊಹಿನೂರ್ ಅನ್ನು ಮರಳಿ ಪಡೆಯಬಹುದೇ? ರಾಣಿ ಎಲಿಜಬೆತ್ ವಸಾಹತುಶಾಹಿ ಕಾಲದ ಭಾಗವಲ್ಲ ಎಂಬುದನ್ನು ನೆನಪಿಸಿ ಅವರು ವಜ್ರವನ್ನು ಮರಳಿ ಭಾರತಕ್ಕೆ ತರಬಹುದೇ ಎಂದು ಕೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...