Tuesday, May 5, 2026
Tuesday, May 5, 2026

ಎಂಪಿಎಂ ಕಾರ್ಮಿಕರ ರಕ್ಷಣೆಗೆ ಸಂಸದರ ಯತ್ನ

Date:

ಭದ್ರಾವತಿಗೆ ಉಕ್ಕು ಮತ್ತು ಕಾಗದ ಕಾರ್ಖಾನೆಗಳು ಅರಿಶಿನ ಕುಂಕುಮಗಳೆನಿಸಿದ್ದವು.
ಆದರೆ ಕಾಗದ ಕಾರ್ಖಾನೆ ಬೀಗಜಡಿದು ಕಾರ್ಮಿಕರ ಬಾಳು ಈಗ ಮೂರಾಬಟ್ಟೆಯಾಗಿದೆ. ಎಂಪಿಎಂ ಎಂದೇ ಖ್ಯಾತಿ ಪಡೆದ ಕಾಗದ ಕಾರ್ಖಾನೆಯ ಮರು ಆರಂಭಕ್ಕೆ ಸದ್ಯ ಸಂಸದ ಬಿ. ವೈ. ರಾಘವೇಂದ್ರ ಪ್ರಯತ್ನಶೀಲರಾಗಿದ್ದಾರೆ.
ಕಾರ್ಖಾನೆಯ 209 ಮಂದಿ ನೌಕರರಲ್ಲಿ 129 ಮಂದಿ ವಿವಿಧ ನಿಗಮ ಮಂಡಳಿಯ 19 ಕಡೆಯಲ್ಲಿ ಎರವಲು ಸೇವೆ ಮೇಲೆ ಕೆಲಸ ಮಾಡುತ್ತಿದ್ದಾರೆ.
7 ಮಂದಿ ಎಂಪಿಎಂ ಫಾರೆಸ್ಟ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. 52 ಮಂದಿ ಎಂಪಿಎಂ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಉಳಿದ 21 ಮಂದಿ ಕಾರ್ಮಿಕರು ಸರ್ಕಾರಿ ಸ್ವಾಮ್ಯದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿ ಸಂದರ್ಶನದಲ್ಲಿ ಭಾಗವಹಿಸಿ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
“ನಮ್ಮ ಮನವಿಗೆ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳು ಸ್ಪಂದಿಸಿದರು.ಇದರ ಪರಿಣಾಮ ಸೇವೆಯಲ್ಲಿದ್ದ ನೌಕರರಿಗೆ ಸಿದ್ಧಪಡಿಸಿದ ವಿಮುಕ್ತಿ ಪತ್ರವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಖ್ಯಮಂತ್ರಿಗಳ ನೇತೃತ್ವದ ಸಭೆ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ” ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...