Monday, December 15, 2025
Monday, December 15, 2025

ನಾನು ಭೂಮಿತಾಯಿಯ ಪುತ್ರಿ : ವಿನಿಷಾ

Date:

ಸ್ಕಾಟ್ಲೆಂಡ್ನ ಗ್ಲಾಸ್ಗೊದಲ್ಲಿ ನಡೆಯುತ್ತಿರುವ ಸಿಒಪಿ 26 ಹವಾಮಾನ ಶೃಂಗಸಭೆಗೆ ಇಂಗ್ಲೆಂಡಿನ ಪ್ರಿನ್ಸ್ ವಿಲಿಯಮ್ಸ್ ಅವರಿಂದ ಭಾರತದ ತಮಿಳುನಾಡು ಮೂಲದ 14 ವರ್ಷದ ಬಾಲಕಿ ವಿನಿಷಾ ಉಮಾಶಂಕರ್ ಆಹ್ವಾನಿತರಾಗಿದ್ದರು.

ಬಿಬಿಸಿ ಮಾಧ್ಯಮ ಸಂಸ್ಥೆಯ ಪ್ರತಿಷ್ಠಿತ ‘ಅರ್ಥ್ ಶಾರ್ಟ್’ ಪ್ರಶಸ್ತಿಯ ಫೈನಲ್ ತಲುಪಿದ್ದ 15 ಸ್ಪರ್ಧಿಗಳಲ್ಲಿ ಒಬ್ಬರಾದ ವಿನಿಷಾ ಸೌರಚಾಲಿತ ಐರನಿಂಗ್ ಕಾರ್ಟ್ ಯೋಜನೆ ಮೂಲಕ ಜಾಗತಿಕ ಗಮನ ಸೆಳೆದಿದ್ದಾರೆ.

ಸಿಒಪಿ 26 ಹವಾಮಾನ ಶೃಂಗಸಭೆಯಲ್ಲಿ ವಿನಿಷಾ ಸುಮಾರು ಐದು ನಿಮಿಷ ತಂತ್ರಜ್ಞಾನ ಹಾಗೂ ನಾವಿನ್ಯತೆ ವಿಷಯ ಕುರಿತು ಮಾತನಾಡಿದರು. ” ಹವಾಮಾನ ಬದಲಾವಣೆ, ಪರಿಸರ ರಕ್ಷಣೆ ಕುರಿತು ನಾವೀಗ ಬರೀ ಮಾತನಾಡುವ ಹಂತದಲ್ಲಿಲ್ಲ. ಮಾತನಾಡುವುದನ್ನು ನಿಲ್ಲಿಸಿ, ಕೆಲಸ ಆರಂಭಿಸುವ ಹಂತದಲ್ಲಿದ್ದೇವೆ. ಹಾಗಾಗಿ ನಮ್ಮ ಮುಂದಿನ ಭವಿಷ್ಯಕ್ಕಾಗಿ ಸಮಯ, ಹಣ, ನೂತನ ಧೇಯೋದ್ದೇಶ ಅಳವಡಿಕೆಯ ಅಗತ್ಯವಿದೆ” ಎಂದು ಹೇಳಿದರು.

” ನಾವು ಸಿಟ್ಟು ಮಾಡಿಕೊಳ್ಳಲು ತುಂಬಾ ಕಾರಣಗಳಿವೆ. ಆದರೆ ನಾನು ಸಿಟ್ಟು ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅದಕ್ಕೆಲ್ಲ ಈಗ ಸಮಯ ಇಲ್ಲ. ನಾನು ಕಾರ್ಯಪ್ರವೃತ್ತಳಾಗಲು ಇಷ್ಟಪಡುತ್ತೇನೆ. ನಾನು ಬರೀ ಭಾರತೀಯಳಲ್ಲ, ನಾನು ಭೂಮಿತಾಯಿಯ ಪುತ್ರಿ. ಇದರ ಬಗ್ಗೆ ನನಗೆ ಹೆಮ್ಮೆ ಇದೆ. ವಿದ್ಯಾರ್ಥಿನಿಯಾಗಿ, ಪರಿಸರ ಕಾಳಜಿವುಳ್ಳವಳಾಗಿ, ಮೇಲಾಗಿ ಆಶಾವಾದ ಇಟ್ಟುಕೊಂಡ ವಳಗಿ ಹೇಳುತ್ತಿದ್ದೇನೆ. ಎಲ್ಲರೂ ಕಾರ್ಯಪ್ರವೃತ್ತರಾಗೋಣ. ನಮ್ಮ ಯುವಪೀಳಿಗೆಯ ಉಜ್ವಲ ಭವಿಷ್ಯಕ್ಕಾಗಿ ಶ್ರಮ ವಹಿಸೋಣ” ಎಂದು ವಿನಿಷಾ ಹೇಳಿದರು.

ಬಾಲಕಿ ವಿನಿಷಾ ಅವರ ಮಾತುಗಳಿಗೆ ಪ್ರಧಾನಿ ಮೋದಿಜಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ವಿಶ್ವದ ಹಲವು ನಾಯಕರು ಎದ್ದುನಿಂತು ಗೌರವ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...