Sunday, December 7, 2025
Sunday, December 7, 2025

ಸ್ಫೂರ್ತಿ ದಿನಾಚರಣೆಯಾಗಿ ಡಾ.ಪುನೀತ್ ಜನ್ಮದಿನ

Date:

ದೊಡ್ಮನೆ ಹುಡುಗ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ ಅನೇಕ ತಿಂಗಳುಗಳೆ ಕಳೆದಿದ್ದರೂ ಸಹ ಕನ್ನಡಿಗರ ಮನಸ್ಸಿನಲ್ಲಿ ಅವರು ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ.

ಕರ್ನಾಟಕ ಸರ್ಕಾರ ಸಹ ಪುನೀತ್ ರಾಜಕುಮಾರ್ ಅವರ ಜನ್ಮದಿನವಾದ ಮಾರ್ಚ್ 17 ಅನ್ನು ಸ್ಪೂರ್ತಿ ದಿನವನ್ನಾಗಿ ಸರ್ಕಾರದ ವತಿಯಿಂದಲೇ ಆಚರಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಈ ಬಾರಿಯ ದಸರಾ ಮಹೋತ್ಸವದ ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಅಪ್ಪು ಅಭಿನಯದ ಸಾಮಾಜಿಕ ಸಂದೇಶ ಸಾರುವ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.

ಇದಕ್ಕಾಗಿ ಚಿತೋತ್ಸವದ ಒಂದು ದಿನ ಮೀಸಲಿಡಲಾಗಿದೆ.
ಇದರ ಮಧ್ಯೆ ಶಿವಮೊಗ್ಗದ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಮತ್ತೊಂದು ಮಹತ್ವದ ಕಾರ್ಯ ಮಾಡಿದ್ದಾರೆ. ಅದೇನು ಅಂದ್ರೆ… ವಿಶ್ವದ ಅತ್ಯಂತ ಎತ್ತರದ ಪ್ರದೇಶಗಳಲ್ಲಿ ಒಂದಾಗಿರುವ ಲಡಾಕ್ ನ ಖರದುಂಗ್ಲಾ ಪಾಸ್ ನಲ್ಲಿ ಪುನೀತ್ ರಾಜಕುಮಾರ್ ಅವರ ಭಾವಚಿತ್ರದೊಂದಿಗೆ ಕನ್ನಡ ಧ್ವಜವನ್ನು ಹಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಮೋದ್, ಪ್ರಮುಖರಾದ ಗೌತಮ್, ಹರೀಶ್, ಕಿರಣ್ ತಮ್ಮ ನೆಚ್ಚಿನ ನಟನ ಫೋಟೋದೊಂದಿಗೆ ಕ್ಲಿಕ್ಕಿಸಿಕೊಂಡಿರುವ ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...