Tuesday, October 1, 2024
Tuesday, October 1, 2024

ಬಿಡುಗಡೆಯಾದ ಕೈದಿಗಳು ಸ್ವಾವಲಂಬಿಯಾಗಲು ಅಣಬೆ ಕೃಷಿ ಸಹಾಯಕ

Date:

ಶಿವಮೊಗ್ಗ ಅಣಬೆ ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ಸಸ್ಯಾಭಿವೃದ್ದಿ ಈ ತರಹದ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಯಾವುದೋ ಕಾರಣಾಂತರಗಳಿಂದ ಬಂಧಿಗಳಾಗಿರುವವರು ಇಲ್ಲಿಂದ ಹೊರಗೆ ಹೋದ ಮೇಲೆ ಸ್ವಾವಲಂಬಿ ಜೀವನ ಮಾಡಿ ಉತ್ತಮ ಸನ್ನಡತೆಯಿಂದ ಮುಂದುವರೆಯಬೇಕೆಂದು ಜಿಲ್ಲಾ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಡಾ.ಅನಿತಾ ರವರು ಖೈದಿಗಳಿಗೆ ಕರೆ ನೀಡಿದರು.

ಶಿವಮೊಗ್ಗ ಕೇಂದ್ರ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮಾಣು ಜೀವಿ ಶಾಸ್ತ್ರ ವಿಭಾಗ ಹಾಗೂ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಧುನಿಕ ಅಣಬೆ ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ಸಸ್ಯಾಭಿವೃದ್ದಿ ತಂತ್ರಜ್ಞಾನ ಕುರಿತಾದ ತರಬೇತಿ ಹಾಗೂ ಪ್ರಾತ್ಯಕ್ಷಿಕೆಯ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅತ್ಯುತ್ತಮ ಪೋಷಕಾಂಶಯುಕ್ತ ಹಾಗೂ ಬಹಳ ಬೇಡಿಕೆ ಇರುವ ಅಣಬೆ ಕೃಷಿ, ಸಾವಯವ ಕೃಷಿಗೆ ಒತ್ತು ನೀಡುವ ಎರೆಹುಳು ಗೊಬ್ಬರ ತಯಾರಿಕೆ ಮತ್ತು ಸಸ್ಯಾಭಿವೃದ್ದಿ ಮಾಡಿ ಉತ್ತಮ ದುಡಿಮೆಯನ್ನು ಕಂಡುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕಾರಾಗೃಹದಲ್ಲಿಯೇ ತರಬೇತಿ ನೀಡುವುದಲ್ಲದೆ ಅಂತಹ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲು ಬಯಸುತ್ತೇನೆ ಎಂದು ಅವರು ಹೇಳಿದರು.

ಡಾ.ನಂದೀಶ್, ಡಾ.ಸಂತ್ತೋಷ್ ಹಾಗೂ ಡಾ.ಸೌಮ್ಯ ರವರುಗಳು ಕ್ರಮವಾಗಿ ಅಣಬೆ ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ಸಸ್ಯಾಭಿವೃದ್ದಿ ತಂತ್ರಜ್ಞಾನ ಕುರಿತಾದ ತರಬೇತಿ ಹಾಗೂ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಕೃಷಿ ತಂತ್ರಜ್ಞರ ಸಂಸ್ಥೆಯ ರಾಜ್ಯ ನಿರ್ದೇಶಕರಾದ ಡಾ. ಕೋಟೆ ಲೋಕೇಶ್ವರ್, ಕಾರಾಗೃಹದ ಜೈಲರ್ ಮಹೇಶ್, ಸಹಾಯಕ ಅಧೀಕ್ಷಕರಾದ ಶಿವಾನಂದಶಿವಪ್ಪ ರವರುಗಳು ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರಾಗೃಹದ ಶಿಕ್ಷಕ ಗೋಪಾಲಕೃಷ್ಣ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...