Sunday, May 24, 2026
Sunday, May 24, 2026

ಬಿಡುಗಡೆಯಾದ ಕೈದಿಗಳು ಸ್ವಾವಲಂಬಿಯಾಗಲು ಅಣಬೆ ಕೃಷಿ ಸಹಾಯಕ

Date:

ಶಿವಮೊಗ್ಗ ಅಣಬೆ ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ಸಸ್ಯಾಭಿವೃದ್ದಿ ಈ ತರಹದ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಯಾವುದೋ ಕಾರಣಾಂತರಗಳಿಂದ ಬಂಧಿಗಳಾಗಿರುವವರು ಇಲ್ಲಿಂದ ಹೊರಗೆ ಹೋದ ಮೇಲೆ ಸ್ವಾವಲಂಬಿ ಜೀವನ ಮಾಡಿ ಉತ್ತಮ ಸನ್ನಡತೆಯಿಂದ ಮುಂದುವರೆಯಬೇಕೆಂದು ಜಿಲ್ಲಾ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಡಾ.ಅನಿತಾ ರವರು ಖೈದಿಗಳಿಗೆ ಕರೆ ನೀಡಿದರು.

ಶಿವಮೊಗ್ಗ ಕೇಂದ್ರ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮಾಣು ಜೀವಿ ಶಾಸ್ತ್ರ ವಿಭಾಗ ಹಾಗೂ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಧುನಿಕ ಅಣಬೆ ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ಸಸ್ಯಾಭಿವೃದ್ದಿ ತಂತ್ರಜ್ಞಾನ ಕುರಿತಾದ ತರಬೇತಿ ಹಾಗೂ ಪ್ರಾತ್ಯಕ್ಷಿಕೆಯ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅತ್ಯುತ್ತಮ ಪೋಷಕಾಂಶಯುಕ್ತ ಹಾಗೂ ಬಹಳ ಬೇಡಿಕೆ ಇರುವ ಅಣಬೆ ಕೃಷಿ, ಸಾವಯವ ಕೃಷಿಗೆ ಒತ್ತು ನೀಡುವ ಎರೆಹುಳು ಗೊಬ್ಬರ ತಯಾರಿಕೆ ಮತ್ತು ಸಸ್ಯಾಭಿವೃದ್ದಿ ಮಾಡಿ ಉತ್ತಮ ದುಡಿಮೆಯನ್ನು ಕಂಡುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕಾರಾಗೃಹದಲ್ಲಿಯೇ ತರಬೇತಿ ನೀಡುವುದಲ್ಲದೆ ಅಂತಹ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲು ಬಯಸುತ್ತೇನೆ ಎಂದು ಅವರು ಹೇಳಿದರು.

ಡಾ.ನಂದೀಶ್, ಡಾ.ಸಂತ್ತೋಷ್ ಹಾಗೂ ಡಾ.ಸೌಮ್ಯ ರವರುಗಳು ಕ್ರಮವಾಗಿ ಅಣಬೆ ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ಸಸ್ಯಾಭಿವೃದ್ದಿ ತಂತ್ರಜ್ಞಾನ ಕುರಿತಾದ ತರಬೇತಿ ಹಾಗೂ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಕೃಷಿ ತಂತ್ರಜ್ಞರ ಸಂಸ್ಥೆಯ ರಾಜ್ಯ ನಿರ್ದೇಶಕರಾದ ಡಾ. ಕೋಟೆ ಲೋಕೇಶ್ವರ್, ಕಾರಾಗೃಹದ ಜೈಲರ್ ಮಹೇಶ್, ಸಹಾಯಕ ಅಧೀಕ್ಷಕರಾದ ಶಿವಾನಂದಶಿವಪ್ಪ ರವರುಗಳು ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರಾಗೃಹದ ಶಿಕ್ಷಕ ಗೋಪಾಲಕೃಷ್ಣ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...