Sunday, December 7, 2025
Sunday, December 7, 2025

ಮಂಗಳೂರಿನ ದಸರಾ ಶಾರದೆಗೆ ಚಿನ್ನದ ಜರಿ ಮೆರುಗು

Date:

ಈ ಬಾರಿ ದಸರಾ ಮಹೋತ್ಸವದಲ್ಲಿ ಮಂಗಳೂರಿನ ರಥಬೀದಿ ಶಾರದೆ 8 ಲಕ್ಷ ರೂ. ಮೌಲ್ಯದ ಚಿನ್ನದ ಜರಿ ಸೀರೆಯೊಂದಿಗೆ ಮಿಂಚಲಿದ್ದಾಳೆ. ಈ ಸೀರೆಯನ್ನು ವಾರಣಾಸಿ ಜ್ಞಾನವ್ಯಾಪಿ ದೇಗುಲ ಬಳಿಯ ಮುಸ್ಲಿಂ ಕುಟುಂಬವೊಂದು ಕಳೆದ 6 ತಿಂಗಳಿನಿಂದ ತಯಾರಿಸುತ್ತಿದೆ.

ಪ್ರತಿವರ್ಷ ಶಾರದೆಯ ಶೋಭಾಯಾತ್ರೆ ಸಂದರ್ಭ ಬೆಳ್ಳಿಯ ಜರಿಯಿರುವ ರೇಷ್ಮೆ ಸೀರೆಯನ್ನು ಶಾರದಾ ದೇವಿಗೆ ಉಡಿಸಲಾಗುತ್ತಿದ್ದು, ನಗರದ ದಾನಿಯೊಬ್ಬರು ಈ ಸೀರೆಯನ್ನು ಕೊಡುಗೆಯಾಗಿ ನೀಡುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ವಾರಣಾಸಿ ಮುಸ್ಲಿಂ ಕುಟುಂಬವೇ ಈ ಸೀರೆಯನ್ನು ತಯಾರಿಸುತ್ತಿದ್ದು, ಈ ಬಾರಿ ಶಾರದೆಯ ಸೀರೆ ತಯಾರಿಸುವವರು ಆ ಕುಟುಂಬದ 5ನೇ ತಲೆಮಾರಿನವರಾಗಿದ್ದಾರೆ.

ಮಂಗಳೂರು ಶಾರದಾ ಮಹೋತ್ಸವದ ಶತಮಾನೋತ್ಸವದ ಈ ಪರ್ವಕಾಲದಲ್ಲಿ ಶಾರದಾ ಮಹೋತ್ಸವ ಸಮಿತಿ ಮತ್ತು ಭಕ್ತಾದಿಗಳು ಒಟ್ಟು ಸೇರಿ 200 ಪವನ್‌ ತೂಕದ ಸ್ವರ್ಣಾಭರಣಗಳನ್ನು ಸಮರ್ಪಿಸಲಿದ್ದಾರೆ. ಅದರಲ್ಲಿ ಶಾರದೆಗೆ ಚಿನ್ನದ ವೀಣೆ, ನವಿಲೂ ಸೇರಿದೆ. ಇದು ಮಾತ್ರವಲ್ಲದೆ ಶಾರದೆಗೆ ರಜತ ಬೆಳ್ಳಿ ದೀಪಗಳು ಸಮರ್ಪಣೆಯಾಗುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...