Sunday, August 23, 2026
Sunday, August 23, 2026

ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಸರ್ಕಾರಿ ನೌಕರರೆಂದು ನೇಮಕಾತಿ

Date:

ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಬಿಬಿಎಂಪಿಯ 3673 ನೌಕರರು, ನಗರಸಭೆ, ಪುರಸಭೆಗಳಲ್ಲಿ 5533 ಮತ್ತು ಮಹಾನಗರ ಪಾಲಿಕೆಗಳಲ್ಲಿನ 1927 ಪೌರಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಪೌರಕಾರ್ಮಿಕರು 17,000-28,980 ವೇತನ ಶ್ರೇಣಿ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...