Tuesday, May 5, 2026
Tuesday, May 5, 2026

ರಾಜಕುಮಾರ. ಬಸವಶ್ರೀ…ಪುನೀತ .

Date:

ಈಗ ಪುನೀತ್ ರಾಜ್ ಕುಮಾರ್
ಕೈಗೊಂಡ ಸಾಮಾಜಿಕ ಸೇವೆಗಳು
ಎಲ್ಲರ ಗಮನಕ್ಕೆ ಬಂದಿವೆ.
26 ಅನಾಥಾಶ್ರಮಗಳು, 45 ಉಚಿತ ಶಾಲೆ, 16 ವೃದ್ಧಾಶ್ರಮ, 19 ಗೋಶಾಲೆ, 1800 ಮಕ್ಕಳ ಸಂಪೂರ್ಣ ಶಿಕ್ಷಣ . ಹೆತ್ತವರಾದ ಕರ್ನಾಟಕ ರತ್ನ ಡಾ.ರಾಜ್ ಮತ್ತು ಪಾರ್ವತಮ್ಮನವರು ಸ್ಥಾಪಿಸಿದ ಮೈಸೂರಿನ” ಶಕ್ತಿ ಧಾಮ “ದಲ್ಲಿ ಮಕ್ಕಳಿಗೆ ಶಿಕ್ಷಣ ವ್ಯವಸ್ಥೆಯನ್ನು ಮಾಡಿದ್ದಾರೆ.

ಜೀವಮಾನದಲ್ಲಿ ಒಬ್ಬ ಮನುಷ್ಯ ಮಾಡಬಹುದಾದ ಕೊಡುಗೆಕಿಂತ
ಇವು ಹೆಚ್ಚಾಗಿಯೇ ಇವೆ.ಅವರ
‘ ರಾಜಕುಮಾರ’ ಸಿನಿಮಾ ಮಹತ್ವದ್ದು.ವೃದ್ದಾಪ್ಯದಲ್ಲಿ ಹೆತ್ತವರನ್ನ ವೃದ್ಧಾಶ್ರಮಕ್ಕೆ ತಳ್ಳುವ ಇಂದಿನ
ಪೀಳಿಗೆಗೆ ಕಣ್ತೆರೆಸುವ ಸಂದೇಶವಿದೆ.

ಅವರು ಹಿನ್ನೆಲೆಗಾಯನದಿಂದ ಬಂದ
ಹಣವನ್ನ ವೃದ್ಧಾಶ್ರಮಕ್ಕೇ ನೀಡುತ್ತಿದ್ದರಂತೆ. ಇನ್ನು ಜಾಹೀರಾತುಗಳಿಗೆ ಮಾಡೆಲ್ ಆಗಿ
ಸಂಪಾದಿಸಿದ ಹಣವೂ ಕೂಡ ಸಮಾಜ ಸೇವೆಗೇ ಮೀಸಲಾಗಿತ್ತು.
ಕೆಲವು ಸಾಮಾಜಿಕ ಬದ್ಧತೆಯುಳ್ಳ
ಸಂದೇಶಗಳಿಗೆ ರಾಯಭಾರಿಗಳಾಗಿದ್ದರು. ಅವುಗಳಿಂದ ಗೌರವಧನವನ್ನೇ ಸ್ವೀಕರಿಸುತ್ತಿರಲಿಲ್ಲ. ಸಮಾಜ ಸೇವೆ ಎಂದರೆ ಸ್ವೀಕರಿಸುವ ಹಣದಲ್ಲಿ
ಶೇಕಡಾವಾರು ಮೀಸಲಲ್ಲ.ಅಷ್ಡೂ ಇಡುಗಂಟನ್ನ ಆಯಾ ಸೇವೆಗೇ ಕೊಟ್ಟುಬಿಡುತ್ತಿದ್ದ ಧಾರಾಳಿ ಈ ‘ದೊಡ್ಮನೆ ಹುಡುಗ’.

ಇಪ್ಪತ್ತಾರು ಅನಾಥಾಶ್ರಮಗಳು.
ನಿಜಕ್ಕೂ ಅಲ್ಲಿನ ಮಕ್ಕಳು ಯುವರತ್ನನಿಗೆ ಸ್ವರ್ಗ ಸಿಗಲೆಂದೇ
ಮನಪೂರ್ತಿ ಹರಸುತ್ತಾರೆ.
ನಾಲ್ವತೈದು ಉಚಿತ ಶಾಲೆಗಳಲ್ಲಿ
ವಿದ್ಯಾದಾನ ಮಾಡಿದ ಪುಣ್ಯ ಪುನೀತನಿಗೆ. ಹತ್ತೊಂಬತ್ತು ಗೋಶಾಲೆಗಳು.ಅಲ್ಲಿನ ಮೂಕ ಗೋಮಾತೆ ಕೂಡ ಪುನೀತನಿಗೆ
ಪುಣ್ಯತುಂಬಿ ಹರಸುತ್ತಿವೆ.
ಸಾವಿರದ ಎಂಟುನೂರು ಮಕ್ಕಳಿರುವ ” ಶಕ್ತಿಧಾಮ”.ಅದರ ಹೊಣೆಯನ್ನ ಮಿತ್ರ ನಟ ವಿಶಾಲ್
ವಹಿಸಿಕೊಂಡಿದ್ದಾರೆ.
ಹಿರಿಯರು ಹೇಳುವ ಮಾತಿದೆ
ಈ ಜಗತ್ತಿಗೆ ಬರುವಾಗ ನಾವು
ಅಳುತ್ತಿರುತ್ತೇವೆ. ಪೋಷಕರು ಆನಂದದಿಂದ ನಗುತ್ತಿರುತ್ತಾರೆ.
ಆದರೆ ಜಗತ್ತನ್ನ ಬಿಟ್ಟು ಹೋಗುವಾಗ
,ನಗುತ್ತಾ ಹೋಗ ಬೇಕಂತೆ.ಆಗ ಸಮಾಜ ಅಳುತ್ತಿರುವುದಂತೆ.
ಹಾಗೆ ಅಪ್ಪು ನಗುತ್ತಲೇ ಹೋಗಿದ್ದಾರೆ.
ನಾವು ಅಗಲಿಕೆಯ ದುಃಖದಲ್ಲಿ
ಮುಳುಗಿದ್ದೇವೆ.

ಇಂತಹ ವ್ಯಕ್ತಿಗೆ ಬಸವಶ್ರೀ ಪ್ರಶಸ್ತಿ
ಅರಸಿ ಬಂದಿದೆ. ಸಾಮಾಜಿಕ ಕಳಕಳಿಯುಳ್ಳ ಮನುಷ್ಯರಿಗೆ ನೀಡುವ ಈ ಪುರಸ್ಕಾರಕ್ಕೆ ಬೆಲೆಬಾಳುವಂಥ ವ್ಯಕ್ತಿಯೇ ಆಯ್ಕೆಯಾಗಿದ್ದಾರೆ. ಪ್ರಶಸ್ತಿಗೂ ಮೌಲ್ಯ ಹೆಚ್ಚಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...