Tuesday, December 16, 2025
Tuesday, December 16, 2025

ಹಿಂದೂ ಧರ್ಮಕ್ಕೆ ಆದಿಶಂಕರರ ಕೊಡುಗೆ ಅಪಾರ : ಮೋದಿಜಿ

Date:

ನವೆಂಬರ್ 5 ರಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರು ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥ್ ಗೆ ಭೇಟಿ ನೀಡಿದರು. ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣ ಮಾಡುವ ಕಾರ್ಯಕ್ರಮಕ್ಕೆ ಆಗಮಿಸಿದರು. 2016ರಲ್ಲಿ ಬಂದ ಹಿಮ ಪ್ರವಾಹದ ಪರಿಣಾಮವಾಗಿ ಶಂಕರಾಚಾರ್ಯರ ಸಮಾಧಿ ಅಸ್ತವ್ಯಸ್ತವಾಗಿತ್ತು. ಮತ್ತೆ ಅದರ ಪುನರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಶ್ರೀ ಶಂಕರಾಚಾರ್ಯರ ಪ್ರತಿಮೆಯನ್ನ ಮೈಸೂರಿನ ಶಿಲ್ಪಿ ಅವರು ತಮ್ಮ ಕರಕುಶಲತೆಯಿಂದ ನಿರ್ಮಿಸಿದ್ದಾರೆ. 12 ಅಡಿ ಎತ್ತರ ಇರುವ ಶಂಕರಾಚಾರ್ಯರ ಮೂರ್ತಿಯನ್ನು ಬಹುಸುಂದರವಾಗಿ ನಿರ್ಮಿಸಲಾಗಿದೆ. ಅವರ ಶಿಲ್ಪ ಕಲಾ ನೈಪುಣ್ಯಕ್ಕೆ ಗೌರವಿಸಿ ಕೇಂದ್ರ ಸರ್ಕಾರ ಅವರನ್ನು ಪರೀಕ್ಷಾರ್ಥವಾಗಿ ಆಚಾರ್ಯರ ಮಾದರಿ ಮೂರ್ತಿಯನ್ನು ಕೆತ್ತನೆ ಮಾಡಲು ಕೇಳಲಾಗಿತ್ತು. ಮೋದಿ ಅವರೇ ಈ ಕೆತ್ತನೆಗೆ ಮನಸೋತು ಕೆಲಸ ಆರಂಭಿಸಲು ಸೂಚಿಸಿದರು. ಶಂಕರಾಚಾರ್ಯರ ಮೂರ್ತಿಯನ್ನು ಕೃಷ್ಣ ಶಿಲೆಯಲ್ಲಿ ನಿರ್ಮಿಸಲಾಗಿದೆ.

ಪ್ರಧಾನಿ ಮೋದಿ ಜಿ ಅವರು ಕೇದಾರೇಶ್ವರನಿಗೆ ಅರ್ಚನೆಯ ಮಾಡಿ ಪೂಜೆ ಸಲ್ಲಿಸಿದರು. ಕನ್ನಡಿಗ ಅರ್ಚಕರಾದ ಶ್ರೀ ವಾಗೀಶ ಲಿಂಗ ಅವರು ರುದ್ರಾಕ್ಷಿ ಹಾರವನ್ನು ಪ್ರಧಾನಿಯವರ ಕೊರಳಿಗೆ ತೊಡಿಸಿ ಸ್ವಾಗತಿಸಿದರು. ನಂತರ ಪ್ರಧಾನಿಯವರು ಕೇದಾರೇಶ್ವರನಿಗೆ ಆರತಿ ಬೆಳಗಿದರು. ಭಕ್ತಿಪರವಶರಾಗಿ ಆದಿಶಂಕರಾಚಾರ್ಯರ ಪ್ರತಿಮೆ ಮುಂದೆ ಧ್ಯಾನಸ್ಥರಾಗಿ ಕುಳಿತಿದ್ದರು. ತಮ್ಮ ಭಾಷಣದಲ್ಲಿ ಹಿಂದೂ ಧರ್ಮಕ್ಕೆ ಆದಿಶಂಕರರ ಕೊಡುಗೆ ಅಪಾರ ಎಂದು ಸ್ಮರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...