Thursday, February 5, 2026
Thursday, February 5, 2026

72 ಗಂಟೆಯೊಳಗಡೆ ಬಡವರಿಗೆ ಪಿಂಚಣಿ ಮಂಜೂರು- ಸಚಿವ ಅಶೋಕ್

Date:

ಬಡವರಿಗೆ 72 ಗಂಟೆಯೊಳಗೆ ಪಿಂಚಣಿ ಮಂಜೂರು ಮಾಡಲಾಗುವುದು. ಫೋನ್ ನಲ್ಲಿ ಕೋರಿದರೂ ದಾಖಲೆ ಪಡೆದು ಪಿಂಚಣಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕರು ಪಿಂಚಣಿ ಕೋರಿದ 72 ಗಂಟೆ ಒಳಗೆ ಪಿಂಚಣಿ ಮಂಜೂರಾತಿ ಮಾಡುವ ವ್ಯವಸ್ಥೆ ತರಲಾಗಿದೆ.
ದೂರವಾಣಿ ಮೂಲಕ ಪಿಂಚಣಿ ಕೋರಿದರೂ ಆಧಾರ್ ಕಾರ್ಡ್ ಮತ್ತು ಮನೆಯ ಫೋಟೋ ದಾಖಲೆ ಪಡೆದು ಪಿಂಚಣಿ ನೀಡಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ನ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಈಗಾಗಲೇ ಮನೆ ಬಾಗಿಲಿಗೆ ಮಾಸಾಶನ ಅಭಿಯಾನ ಜಾರಿಗೊಳಿಸಲಾಗಿದೆ. ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಅರ್ಹ ಪಲಾನುಭವಿಗಳನ್ನು ಗುರುತಿಸಿ ನವೋದಯ ಆಪ್ ಮೂಲಕ ಪರಿಶೀಲನೆ ನಡೆಸಿ ಫಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡುತ್ತಾರೆ.
ಕಂದಾಯ ಇಲಾಖೆಯ ಹಲೋ ಕಂದಾಯ ಸಚಿವರೇ ಟೋಲ್ ಫ್ರೀ ಸಹಾಯವಾಣಿ ಆರಂಭಿಸಿದ್ದು, ಈ ದೂರವಾಣಿಗೆ ಕರೆ ಮಾಡಿದರೆ ಸಹಾಯವಾಣಿಯ ಸಿಬ್ಬಂದಿ ವಿವರ ಪಡೆದು ಸಂಬಂಧಿಸಿದ ಗ್ರಾಮ ಲೆಕ್ಕಗರ ಮೊಬೈಲಿಗೆ ರವಾನಿಸುತ್ತಾರೆ.

ಗ್ರಾಮ ಲೆಕ್ಕಿಗರು 72 ಗಂಟೆಯೊಳಗೆ ಪರಿಶೀಲನೆ ನಡೆಸಿ ಪಿಂಚಣಿ ಮಂಜೂರಾತಿ ಆದೇಶ ನೀಡಲಿದ್ದು, ಫಲಾನುಭವಿಯ ಖಾತೆಗೆ ನೇರವಾಗಿ ಹಣ ತಲುಪುವ ವ್ಯವಸ್ಥೆ ಮಾಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...