Thursday, August 13, 2026
Thursday, August 13, 2026

ಮೈಸೂರು ದಸರಾ ನಂತರ ಶಿವಮೊಗ್ಗ ದಸರಾ ಹೆಸರುವಾಸಿ- ರೇಖಾ ರಂಗನಾಥ್

Date:

ಮೈಸೂರು ದಸರಾ ಮಹೋತ್ಸವ ನಂತರ ದಸರಾ ಉತ್ಸವಕ್ಕೆ ನಮ್ಮ ಶಿವಮೊಗ್ಗವೇ ಹೆಸರುವಾಸಿ ಎಂದು ಮಹಿಳಾ ದಸರಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರೇಖಾ ರಂಗನಾಥ್ ಅವರು ತಿಳಿಸಿದ್ದಾರೆ.

ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಹಿಳಾ ದಸರಾ ಕುರಿತು ಮಾಹಿತಿ ಹಂಚಿಕೊಂಡರು. ಈಗಾಗಲೇ ಮಹಿಳಾ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಒಳ್ಳೆಯ ರೀತಿಯಲ್ಲಿ ನಡೆದಿವೆ.
ಮುಂದಿನ ಸೆಪ್ಟೆಂಬರ್ 26ರಂದು ಮಹಿಳಾ ದಸರಾ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಹಿಳಾ ದಸರಾದ ಅಂಗವಾಗಿ ಶಿವಮೊಗ್ಗದ ಒಂಬತ್ತು ಮಹಿಳಾ ಸಾಧಕಿಯರಿಂದ ಉದ್ಘಾಟನಾ ಕಾರ್ಯಕ್ರಮವು ನೆರವೇರಲಿದೆ.
ಶಿವಮೊಗ್ಗ ನಗರದ ವಿವಿಧ ಮಹಿಳಾ ಸಂಘಗಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಸೆ.27ರಂದು ಸಂಜೆ 4 ಗಂಟೆಗೆ ಗೋಪಿ ವೃತ್ತದಿಂದ ಫ್ರೀಡಂ ಪಾರ್ಕ್ ವರೆಗೆ ಮಹಿಳಾ ಸ್ವಾತಂತ್ರ್ಯ ನಡಿಗೆ ಹಾಗೂ ವಿವಿಧ ಮಹಿಳಾ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅತ್ಯುತ್ತಮವಾಗಿ ಸಾಂಸ್ಕೃತಿಕ ಉಡುಗೆಗಳನ್ನು ಧರಿಸಿದ ಮೂರು ಮಹಿಳೆಯರಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಶಿವಮೊಗ್ಗದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.

ಈ ಸಂದರ್ಭದಲ್ಲಿ ಮಹಿಳಾ ದಸರಾ ಸಮಿತಿಯ ಸದಸ್ಯರಾದ ಎಸ್‌. ಜ್ಞಾನೇಶ್ವರ್ , ಶ್ರೀಮತಿ ಆರತಿ ಆ.ಮ .ಪ್ರಕಾಶ್ , ಶ್ರೀಮತಿ ಸಂಗೀತಾ ನಾಗರಾಜ್ , ಶ್ರೀಮತಿ ಅನ್ನಪೂರ್ಣ, ಶ್ರೀಮತಿ ಅನುಪಮಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...