Friday, March 20, 2026
Friday, March 20, 2026

ಮೈಸೂರು ಮಾಹಿತಿ ಬರಹ : ಎಂ.ತುಳಸಿರಾಂ

Date:

ನವಾಬ ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ರಾಜಕೀಯ ಒಳಸಂಚಿಗೆ ಮೈಸೂರು ಅರಸರು ಒಳಗಾಗಿ ರಾಜ್ಯಾಧಿಕಾರದಿಂದ ದೂರಸರಿಸಲ್ಪಟ್ಟ ಸಮಯದಲ್ಲಿ (1734 – 1799 ) ರಾಜ ಮನೆತನ ದವರು ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು.

ಆದರೆ, ದುಃಖ , ಸಂಕಟ , ಅವಮಾನಗಳಿಂದ ಮನ ನೊಂದು ರಾಜ್ಯಭಾರ ವನ್ನು ಮರುಪಡೆಯಲು ಪ್ರಯತ್ನಿಸುತ್ತಿದ್ದ ಸಮಯದಲ್ಲಿ ಎರಡನೇ ಕೃಷ್ಣ ರಾಜ ಒಡೆಯರ ವರ ಧರ್ಮಪತ್ನಿ ಮಹಾರಾಣಿ ಲಕ್ಷ್ಮಮ್ಮಣ್ಣಿ ಯವರು ದೇವರ ಮೊರೆಯೊಗಿದ್ದರು. ಆಗ ದೇವರು ಕನಸಿನಲ್ಲಿ ಮೂಡಿಬಂದು ಶ್ರೀರಂಗ ಪಟ್ಟಣದ ಸಮೀಪ ಇರುವ ಬಲಮುರಿಯಲ್ಲಿರುವ ವೆಂಕಟೇಶ್ವರ ಮೂರ್ತಿಯನ್ನು ಅರಮನೆ ಆವರಣದಲ್ಲಿ ಪ್ರತಿಷ್ಠಾಪಿಸಲು ಸೂಚಿಸಿದರು. ಆ ಮೇರೆಗೆ ಸುಲ್ತಾನರ ಗಮನಕ್ಕೆ ಬರದಂತೆ ಗುಟ್ಟಾಗಿ ಮೈಸೂರು ಅರಮನೆ ಆವರಣದಲ್ಲಿ ಮೂರ್ತಿಯನ್ನು ಪ್ರತಿಷ್ಟಾಪಿಸಿ ಆರಾಧಿಸಿದ ರೆಂಬುದು ಒಂದು ದಂತ ಕಥೆ ಪ್ರಚಲಿತದಲ್ಲಿದೆ. ಬಳಿಕ ಟಿಪ್ಪುಸುಲ್ತಾನ್ 1799 ರ ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಮಡಿದಾಗ , ಮೈಸೂರು ಅರಸರು ರಾಜ್ಯಾಧಿಕಾರವನ್ನು ಮರುಪಡೆದರು .ಅಲ್ಲದೆ 5 ವರ್ಷದ ಬಾಲಕ ಮೂರನೇ ಕೃಷ್ಣರಾಜ ಒಡೆಯರ್ ರಿಗೆ , ಜೂನ್ 30 , 1799 ರಲ್ಲಿ ಪಟ್ಟಾಭಿಷೇಕವಾಯಿತು.
ನಂತರ ಮೂರನೇ ಕೃಷ್ಣರಾಜ ಒಡೆಯರ್ ರವರು ಅವರ ಆಡಳಿತಾವಧಿಯಲ್ಲಿ 1825 ರಲ್ಲಿ ಕಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನವನ್ನು ಮೈಸೂರು ಕೋಟೆಯ ಪಶ್ಚಿಮ ಭಾಗದಲ್ಲಿ ನಿರ್ಮಿಸಿದರು.
ಮೈಸೂರು ಅರಸರ ಇತಿಹಾಸದಲ್ಲಿ ಈ ದೇವಸ್ಥಾನ ಪ್ರಾಮುಖ್ಯತೆ ಪಡೆದಿದೆ.

ಲೇ:ಎಂ.ತುಳಸಿರಾಂ.ಮೈಸೂರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...