Wednesday, December 17, 2025
Wednesday, December 17, 2025

ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು ರಾಷ್ಟ್ರಭಕ್ತರಾಗಬೇಕು- ಈಶ್ವರಪ್ಪ

Date:

ರಾಷ್ಟ್ರ ಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರು ಕೊಲೆ ಮಾಡಲು ಹೋಗಿ ಜೈಲು ಸೇರುತ್ತಾರೆ, ಇಲ್ಲವೇ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಾಂಬ್ ಬ್ಲಾಸ್ಟ್ ಮಾಡಲೂ ಇಬ್ಬರು ಶಂಕಿತರು ಯೋಜನೆ ಮಾಡಿಕೊಂಡಿದ್ದರು ಎನ್ನುವುದು ಆತಂಕಕಾರಿ‌. ಎಸ್ ಡಿಪಿಐ, ಪಿಎಫ್ ಐ ರಾಷ್ಟ್ರದ್ರೋಹಿ ಸಂಘಟನೆಗಳು. ಮುಸ್ಲಿಂ ಯುವಕರನ್ನು ಇಸ್ಲಾಮಿಕ್ ಸ್ಟೇಟ್ಸ್ ಜೊತೆ ಸೇರಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಬಗ್ಗೆ ಮುಸ್ಲಿಂ ಸಮುದಾಯದ ಹಿರಿಯರು ಎಚ್ಚರಿಕೆ ವಹಿಸಬೇಕು ಎಂದರು.

ನಲಪಾಡ್ ಉದ್ಯೋಗವಿಲ್ಲದ ಕಾರಣದಿಂದ ಯುವಕರು ದುಷ್ಕೃತ್ಯಕ್ಕೆ ಇಳಿಯುತ್ತಿದ್ದಾರೆ ಎಂದಿದ್ದಾರೆ. ಕೇವಲ ಮುಸ್ಲಿಂ ಸಮುದಾಯದ ಯುವಕರು ಮಾತ್ರ ಇಂಥ ದುಷ್ಕೃತ್ಯದಲ್ಲಿ ತೊಡಗುತ್ತಾರೆ. ಬೇರೆ ಯಾವ ಯುವಕರು ಈ ರೀತಿಯ ಕೃತ್ಯಗಳಲ್ಲಿ‌ಭಾಗಿಯಾಗುವುದಿಲ್ಲ. ಈ ನಲಪಾಡ್ ಜೈಲಿಗೆ ಹೋಗಿಬಂದಿರುವ ವ್ಯಕ್ತಿ. ಈತ ಕಾಂಗ್ರೆಸ್ ನಾಯಕ. ಆತನನ್ನು ಕಾಂಗ್ರೆಸ್ ನಲ್ಲಿ ಇಟ್ಟುಕೊಳ್ಳುವ ಬಗ್ಗೆ ಕಾಂಗ್ರೆಸ್ ಇನ್ನೊಮ್ಮೆ ಆಲೋಚಿಸಬೇಕು. ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ರಾಷ್ಟ್ರಭಕ್ತರಾಗಬೇಕು. ರಾಷ್ಟ್ರದ್ರೋಹಿಗಳಿಗೆ ಬುದ್ದಿಹೇಳುವ ಕೆಲಸವನ್ನು ಮುಸ್ಲಿಂ ಸಮುದಾಯದ ಹಿರಿಯರು ಮಾಡಬೇಕು ಎಂದು ಈಶ್ವರಪ್ಪ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...