Friday, June 26, 2026
Friday, June 26, 2026

ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು ರಾಷ್ಟ್ರಭಕ್ತರಾಗಬೇಕು- ಈಶ್ವರಪ್ಪ

Date:

ರಾಷ್ಟ್ರ ಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರು ಕೊಲೆ ಮಾಡಲು ಹೋಗಿ ಜೈಲು ಸೇರುತ್ತಾರೆ, ಇಲ್ಲವೇ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಾಂಬ್ ಬ್ಲಾಸ್ಟ್ ಮಾಡಲೂ ಇಬ್ಬರು ಶಂಕಿತರು ಯೋಜನೆ ಮಾಡಿಕೊಂಡಿದ್ದರು ಎನ್ನುವುದು ಆತಂಕಕಾರಿ‌. ಎಸ್ ಡಿಪಿಐ, ಪಿಎಫ್ ಐ ರಾಷ್ಟ್ರದ್ರೋಹಿ ಸಂಘಟನೆಗಳು. ಮುಸ್ಲಿಂ ಯುವಕರನ್ನು ಇಸ್ಲಾಮಿಕ್ ಸ್ಟೇಟ್ಸ್ ಜೊತೆ ಸೇರಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಬಗ್ಗೆ ಮುಸ್ಲಿಂ ಸಮುದಾಯದ ಹಿರಿಯರು ಎಚ್ಚರಿಕೆ ವಹಿಸಬೇಕು ಎಂದರು.

ನಲಪಾಡ್ ಉದ್ಯೋಗವಿಲ್ಲದ ಕಾರಣದಿಂದ ಯುವಕರು ದುಷ್ಕೃತ್ಯಕ್ಕೆ ಇಳಿಯುತ್ತಿದ್ದಾರೆ ಎಂದಿದ್ದಾರೆ. ಕೇವಲ ಮುಸ್ಲಿಂ ಸಮುದಾಯದ ಯುವಕರು ಮಾತ್ರ ಇಂಥ ದುಷ್ಕೃತ್ಯದಲ್ಲಿ ತೊಡಗುತ್ತಾರೆ. ಬೇರೆ ಯಾವ ಯುವಕರು ಈ ರೀತಿಯ ಕೃತ್ಯಗಳಲ್ಲಿ‌ಭಾಗಿಯಾಗುವುದಿಲ್ಲ. ಈ ನಲಪಾಡ್ ಜೈಲಿಗೆ ಹೋಗಿಬಂದಿರುವ ವ್ಯಕ್ತಿ. ಈತ ಕಾಂಗ್ರೆಸ್ ನಾಯಕ. ಆತನನ್ನು ಕಾಂಗ್ರೆಸ್ ನಲ್ಲಿ ಇಟ್ಟುಕೊಳ್ಳುವ ಬಗ್ಗೆ ಕಾಂಗ್ರೆಸ್ ಇನ್ನೊಮ್ಮೆ ಆಲೋಚಿಸಬೇಕು. ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ರಾಷ್ಟ್ರಭಕ್ತರಾಗಬೇಕು. ರಾಷ್ಟ್ರದ್ರೋಹಿಗಳಿಗೆ ಬುದ್ದಿಹೇಳುವ ಕೆಲಸವನ್ನು ಮುಸ್ಲಿಂ ಸಮುದಾಯದ ಹಿರಿಯರು ಮಾಡಬೇಕು ಎಂದು ಈಶ್ವರಪ್ಪ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ...

ವ್ಯಕ್ತಿ ನಾಪತ್ತೆಯಾಗಿ 26ವರ್ಷದ ನಂತರ ಠಾಣೆಯಲ್ಲಿ ದಾಖಲೆಯಾದ ಪ್ರಕರಣದ ಮಾಹಿತಿ

ಮಾಳೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ದಾಖಲಾದ ದೂರಿನ್ವಯ 26 ವರ್ಷಗಳ ಹಿಂದೆ...

Department of Social Welfare ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ‌ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ...