Thursday, February 5, 2026
Thursday, February 5, 2026

ಪದ್ಮಶ್ರೀ ಪ್ರಶಸ್ತಿಗೆ ಸರ್ಕಾರದ ಶಿಫಾರಸು

Date:

ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸದಾಶಿವನಗರದ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಬೇಟಿ ನೀಡಿದ ಮುಖ್ಯಮಂತ್ರಿಗಳು “ಅಭಿಮಾನಿಗಳ ಆಶಯದಂತೆ ಅಪ್ಪು ಅವರಿಗೆ ಪದ್ಮಶ್ರೀ ನೀಡುವ ವಿಚಾರ ಸರ್ವಸಮ್ಮತವಾಗಿದೆ ” ಎಂದು ಹೇಳಿದರು.

ಪುನೀತ್ ರಾಜಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಸಮಯದಲ್ಲಿ ಬೊಮ್ಮಾಯಿಯವರು ಪುನೀತ್ ರಾಜಕುಮಾರ್ ಕನ್ನಡದ ಆಸ್ತಿ ಅವರನ್ನು ಕಳೆದುಕೊಂಡು ಎಂಟು ದಿನಗಳಾಗಿವೆ. ಪುನೀತ್ ಅವರು ಇಲ್ಲವಾಗಿರುವುದು ನಮ್ಮ ಪಾಲಿಗೆ ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಈ ರಾಜ್ಯದ ಜನತೆಯ ಪುನೀತ್ ಕುಟುಂಬದೊಂದಿಗೆ ಇದೆ ಎಂದು ಹೇಳಿದರು.ರಾಜ್ಯ ಸರ್ಕಾರ ಪುನೀತ್ ಅವರ ಅಂತ್ಯಕ್ರಿಯೆಯನ್ನು ಅತ್ಯಂತ ಪ್ರೀತಿ-ಗೌರವ, ಆತ್ಮೀಯತೆಯಿಂದ ಹಾಗೂ ಭಾವನಾತ್ಮಕವಾಗಿ ನಡೆಸಿಕೊಟ್ಟಿರುವುದಕ್ಕಾಗಿ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನವೆಂಬರ್ 16ರಂದು ಹಮ್ಮಿಕೊಂಡಿರುವ ‘ಪುನೀತ ತಮ್ಮನ’ ಕಾರ್ಯಕ್ರಮಕ್ಕೆ ಅಗತ್ಯ ಭದ್ರತೆ ಕಲ್ಪಿಸಲಾಗುವುದು ಎಂದರು. ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್ ಹಾಗೂ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...