Monday, February 2, 2026
Monday, February 2, 2026

ಶಿಕ್ಣದ ಖಾಸಗೀಕರಣ ಶುಲ್ಕ ಏರಿಕೆ ನೀತಿಗಳಿಂದ ಸರ್ಕಾರಿ ಕಾಲೇಜುಗಳಿಗೆ ಪ್ರವೇಶ ಕುಸಿತ

Date:

ಶಿಕ್ಷಣದ ಖಾಸಗೀಕರಣ, ಶುಲ್ಕ ಏರಿಕೆ, ಸರಕಾರಗಳ ಖಾಸಗಿ ಹಿತಾಸಕ್ತಿಪರ ನೀತಿಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು, ಬಹುಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟೂಡೆಂಟ್ಸ್ ಆರ್ಗಾನೈಜೆಷನ್(ಎಐಡಿಎಸ್‍ಓ) ಕಳವಳವ್ಯಕ್ತಪಡಿಸಿದೆ.

ಎಐಡಿಎಸ್‍ಓನ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ‘ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡಲು ಸರಕಾರ ನಿರ್ಧರಿಸಿದೆ.

‘ಸರಕಾರಿ ಕಾಲೇಜುಗಳ ಪದವಿ ದಾಖಲಾತಿ ಈ ವರ್ಷ ಗಣನೀಯವಾಗಿ ಕುಸಿದಿರುವುದು ಈ ಸಮಸ್ಯೆಗಳಿಗೆ ಹಿಡಿದಿರುವ ಕನ್ನಡಿಯಾಗಿದೆ. ಇಂದಿನ ವಾಸ್ತವ ಪರಿಸ್ಥಿತಿಯನ್ನು ಇದು ಎತ್ತಿ ತೋರಿಸುತ್ತದೆ. ಹೀಗಿರುವಾಗ ಈ ಶುಲ್ಕ ಏರಿಕೆಯು ವೈದ್ಯಕೀಯ ಆಕಾಂಕ್ಷಿ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ದೂರ ಉಳಿಸುತ್ತದೆ. ಹಾಗಾಗಿ, ಖಾಸಗಿ ಸಂಸ್ಥೆಗಳ ಹಿತಾಸಕ್ತಿ ಕಾಪಾಡುವ ಶುಲ್ಕ ಏರಿಕೆಯ ನಿರ್ಧಾರವನ್ನು ಸರಕಾರ ಈ ಕೂಡಲೇ ಹಿಂಪಡೆಯಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಈ ವರ್ಷದಿಂದ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ದಾಖಲಾಗುವ ವಿದ್ಯಾರ್ಥಿಗಳು ಹೆಚ್ಚುವರಿಯಾಗಿ ರೂ.12,884 ಪಾವತಿಸಬೇಕಾಗಿದೆ. ಅಂದರೆ, ಈವರೆವಿಗೂ ಇದ್ದ 1,28,746ರೂ.ಗಳ ಜಾಗದಲ್ಲಿ ಇನ್ನೂ ಮುಂದೆ ವಿದ್ಯಾರ್ಥಿಗಳು 1,41,630ರೂ.ಗಳಷ್ಟು ಹೆಚ್ಚುವರಿಯಾಗಿ ಶುಲ್ಕ ಪಾವತಿಸಬೇಕು. ಈ ನಿರ್ಧಾರವನ್ನು ಇತ್ತೀಚೆಗೆ ಕೆಲವು ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸರಕಾರ ನಡೆಸಿದ ಸಭೆಯಲ್ಲಿ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...