Wednesday, February 4, 2026
Wednesday, February 4, 2026

ಕಾನೂನು ಬಾಹಿರ ಚಟುವಟಿಕೆ :ರಾಜ್ಯದಾದ್ಯಂತ 40 ಕ್ಕೂ ಹೆಚ್ಚು ಮಂದಿ ಬಂಧನ

Date:

ರಾಜ್ಯಾದ್ಯಂತ ಏಕಕಾಲದಲ್ಲಿ ಕರ್ನಾಟಕ ಪೊಲೀಸರು ಪಿಎಫ್‌ಐ ಕಚೇರಿ, ನಾಯಕರ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಯಲ್ಲಿ ಶಾಮೀಲಾದ ಅನುಮಾನದ ಮೇಲೆ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ.

ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪಿಎಫ್‌ಐ ನಾಯಕ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಮಂಗಳೂರು, ಬಾಗಲಕೋಟೆ, ರಾಮನಗರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಂತರ, ಕೋಲಾರ, ಮೈಸೂರು, ಚಾಮರಾಜನಗರದಲ್ಲೂ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿಯನ್ನು ನಡೆಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.

ಪಿಎಫ್‌ಐ ಮೇಲೆ ಕೆಲದಿನಗಳ ಹಿಂದೆಯಷ್ಟೆ ಎನ್‌ಐಎ, ಇಡಿ, ರಾಜ್ಯ ಪೊಲೀಸರ ಸಹಕಾರದೊಂದಿಗೆ ದೇಶದಾದ್ಯಂತ ಮಹತ್ವದ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಈ ದಾಳಿ ಸಮಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಲವು ಕಾರ್ಯಕರ್ತರು ಸಕ್ರಿಯವಾಗಿ ಪ್ರತಿಭಟನೆಯನ್ನು ನಡೆಸಿದ್ದರು. ಇವರ ಮೇಲೂ ಸಾಕಷ್ಟು ಅನುಮಾನಗಳು ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ದಾಳಿಯನ್ನು ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...