Thursday, May 14, 2026
Thursday, May 14, 2026

ಭಾರತ 2047ರ ವೇಳೆಗೆ ಸಮೃದ್ಧ ಹಾಗೂ ಬಲಿಷ್ಠ ರಾಷ್ಟ್ರವಾಗಲಿದೆ- ದ್ರೌಪದಿ ಮುರ್ಮು

Date:

ಬೆಂಗಳೂರು ಏರೋಸ್ಪೇಸ್ ವಿಭಾಗ ಆಯೋಜಿಸಿದ್ದ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ (ಐಸಿಎಂಎಫ್) ಉದ್ಘಾಟಿಸಿ ಮಾತನಾಡಿದರು. ಮುಂದಿನ 25 ವರ್ಷಗಳಲ್ಲಿ ಭಾರತ ಅಮೃತ ಕಾಲವನ್ನು ಪ್ರವೇಶಿಸುವುದರಿಂದ ಭವಿಷ್ಯದಲ್ಲಿ ಎಚ್​ಎಎಲ್ ಮತ್ತು ಇಸ್ರೋ ಸಂಸ್ಥೆಗಳು ಮಹತ್ವದ ಮತ್ತು ಸಕಾರಾತ್ಮಕ ಪಾತ್ರ ನಿರ್ವಹಿಸುತ್ತವೆ ಎಂದು ತಿಳಿಸಿದರು.

ಎಚ್​ಎಎಲ್ ಮತ್ತು ಇಸ್ರೋ ಜಂಟಿಯಾಗಿ ಇಡೀ ದೇಶಕ್ಕೆ ಅತ್ಯಾಧುನಿಕ ಸೌಲಭ್ಯ ಹೊಂದಲು ಕ್ರಯೋಜೆನಿಕ್ ಮತ್ತು ಸೆಮಿ-ಕ್ರಯೋಜೆನಿಕ್ ಎಂಜಿನ್​ಗಳನ್ನು ತಯಾರಿಸುತ್ತಿವೆ. ಭಾರತವು ಈ ಸಾಮರ್ಥ್ಯ ಹೊಂದಿರುವ ವಿಶ್ವದ 6ನೇ ದೇಶವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಐಸಿಎಂಎಫ್ ಉದ್ಘಾಟನೆ ಎಚ್​ಎಎಲ್ ಮತ್ತು ಇಸ್ರೋಗೆ ಮಾತ್ರವಲ್ಲ ಇಡೀ ದೇಶಕ್ಕೆ ಐತಿಹಾಸಿಕ ಕ್ಷಣ. ರಕ್ಷಣಾ ಕ್ಷೇತ್ರದಲ್ಲಿ ಭಾರತ ಆರ್ತನಿರ್ಭರವಾಗಲು ಎಚ್​ಎಎಲ್ ಅಪಾರ ಕೊಡುಗೆ ನೀಡಿದೆ. ಸಂಶೋಧನೆ, ಅಭಿವೃದ್ಧಿ ಮತ್ತು ವಿವಿಧ ಏರ್​ಕ್ರಾಫ್ಟ್ ಪ್ಲಾಟ್​ಫಾಮರ್್​ಗಳ ತಯಾರಿಕೆಯಲ್ಲಿ ತನ್ನ ಸಾಮರ್ಥ್ಯವನ್ನು ಮತ್ತೆ ಮತ್ತೆ ಪ್ರದರ್ಶಿಸಿದೆ ಎಂದು ಶ್ಲಾಘಿಸಿದರು. ಕಾರ್ಯತಂತ್ರದ ರಕ್ಷಣೆ ಮತ್ತು ಅಭಿವೃದ್ಧಿಗೆ ಎಚ್​ಎಎಲ್ ಮತ್ತು ಇಸ್ರೋ ಜತೆಯಾಗಿ ಕೊಡುಗೆ ನೀಡುತ್ತಿವೆ. ರಕ್ಷಣಾ ಸಂಬಂಧಿತ ಉಪಕರಣಗಳನ್ನು ತಯಾರಿಸುವ ಶ್ರೇಷ್ಠ ದರ್ಜೆಯ ಸೌಲಭ್ಯ ಹೊಂದಿರುವ ಎಚ್​ಎಎಲ್ ದೇಶಕ್ಕೆ ಅಮೂಲ್ಯ ಆಸ್ತಿ ಎಂದರು. ಇದೇ ಸಂದರ್ಭದಲ್ಲಿ ರಾಷ್ಟ್ರಪತಿಗಳು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಗೆಹಲೋತ್, ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್, ಎಚ್​ಎಎಲ್ ಅಧ್ಯಕ್ಷ ಸಿ.ಬಿ.ಅನಂತಕೃಷ್ಣನ್, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸಚಿವ ಡಾ.ಕೆ.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ...

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ...

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...