Sunday, August 23, 2026
Sunday, August 23, 2026

ಪಿಎಫ್ಐ ನಿಷೇಧವನ್ನ ಇಡೀ ದೇಶವೇ ಸ್ವಾಗತಿಸುತ್ತದೆ-ಅಶ್ವತ್ಥನಾರಾಯಣ

Date:

ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಪಿಎಫ್‌ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು 5 ವರ್ಷಗಳ ಮಟ್ಟಿಗೆ ನಿಷೇಧಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಇಡೀ ದೇಶವೇ ಸ್ವಾಗತಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಘಟನೆಯು ಬೇರೆ ಯಾವುದೇ ರೂಪದಲ್ಲಿ ತಲೆ ಎತ್ತದಂತೆ ತೀವ್ರ ನಿಗಾ ವಹಿಸಲಾಗುವುದು ಎಂದರು.

ಪಿಎಫ್‌ಐ ಸಂಘಟನೆಯು ವಿದೇಶಿ ಜಾಲಗಳ ಮೂಲಕ ಅಕ್ರಮ ನೆರವು ಪಡೆದುಕೊಳ್ಳುತ್ತಿತ್ತು. ಈ ಮೂಲಕ ದೇಶದಲ್ಲಿ ಧಾರ್ಮಿಕ ಸಂಘರ್ಷ ಉಂಟುಮಾಡಲು ಅದು ಸಂಚು ರೂಪಿಸುತ್ತಿತ್ತು ಎಂದು ಅವರು ವಿವರಿಸಿದ್ದಾರೆ.

ಕೇಂದ್ರ ಸರ್ಕಾರವು ಪಿಎಫ್ ಐ ಸಂಘಟನೆಯ ವಿಧ್ವಂಸಕ ಚಟುವಟಿಕೆಗಳು ಹಾಗೂ ಅನುಮಾನಾಸ್ಪದ ಹಣಕಾಸು ವ್ಯವಹಾರಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಇದರ ಬೆನ್ನಲ್ಲೇ ಎರಡು ದಿವಸಗಳ ಹಿಂದೆ ದೇಶಾದ್ಯಂತ ಆ ಸಂಘಟನೆಯ ಕಚೇರಿಗಳು ಮತ್ತು ನಾಯಕರ ಮೇಲೆ ಎನ್‌ಐಎ ದಾಳಿ ನಡೆಸಲಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಮಾಜ ಮತ್ತು ದೇಶದ ಹಿತಕ್ಕೆ ವಿರುದ್ಧವಾಗಿ ವರ್ತಿಸುವ ಯಾವ ಸಂಘಟನೆಗಳನ್ನು ಕೂಡ ಬಿಡುವುದಿಲ್ಲ. ಕೇಂದ್ರ ಸರ್ಕಾರದ ದಾಳಿಯ ಬೆನ್ನಲ್ಲೇ ರಾಜ್ಯ ಪೊಲೀಸರು ಕೂಡ ಮಂಗಳವಾರ 15ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದರು ಎಂದು ಅವರು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...