Tuesday, March 24, 2026
Tuesday, March 24, 2026

ಭೂತಾನ್ ಅಡಕೆ ಆಮದು ಆತಂಕ ಬೇಡ- ಆರಗ ಜ್ಞಾನೇಂದ್ರ

Date:

ರಾಜ್ಯದ ಅಡಕೆ ಬೆಳೆಗಾರರಿಗೆ ಗೃಹ ಸಚಿವ ‘ಆರಗ ಜ್ಞಾನೇಂದ್ರ’ ನೆಮ್ಮದಿ ಸುದ್ದಿ ನೀಡಿದ್ದು, ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಬಗ್ಗೆ ಆತಂಕ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ, ಎಂದರು.

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದೆ. ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂಬುದನ್ನು ಸಚಿವರು, ನೆನಪಿಸಿದರು.

ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದು ಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕ ದಲ್ಲಿದೆ. ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು, ಬೆಳೆಗಾರರಿಗೆ, ಯಾವುದೇ ಗೊಂದಲ ಆತಂಕ ಬೇಡ, ಎಂದು ಸಚಿವರು, ಅಭಯ ನೀಡಿದ್ದಾರೆ.

ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು, ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...