Thursday, May 14, 2026
Thursday, May 14, 2026

ಭೂತಾನ್ ಅಡಕೆ ಆಮದು ಆತಂಕ ಬೇಡ- ಆರಗ ಜ್ಞಾನೇಂದ್ರ

Date:

ರಾಜ್ಯದ ಅಡಕೆ ಬೆಳೆಗಾರರಿಗೆ ಗೃಹ ಸಚಿವ ‘ಆರಗ ಜ್ಞಾನೇಂದ್ರ’ ನೆಮ್ಮದಿ ಸುದ್ದಿ ನೀಡಿದ್ದು, ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಬಗ್ಗೆ ಆತಂಕ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ, ಎಂದರು.

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದೆ. ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂಬುದನ್ನು ಸಚಿವರು, ನೆನಪಿಸಿದರು.

ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದು ಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕ ದಲ್ಲಿದೆ. ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು, ಬೆಳೆಗಾರರಿಗೆ, ಯಾವುದೇ ಗೊಂದಲ ಆತಂಕ ಬೇಡ, ಎಂದು ಸಚಿವರು, ಅಭಯ ನೀಡಿದ್ದಾರೆ.

ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು, ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...