Monday, February 2, 2026
Monday, February 2, 2026

ಭೂತಾನ್ ಅಡಕೆ ಆಮದು ಆತಂಕ ಬೇಡ- ಆರಗ ಜ್ಞಾನೇಂದ್ರ

Date:

ರಾಜ್ಯದ ಅಡಕೆ ಬೆಳೆಗಾರರಿಗೆ ಗೃಹ ಸಚಿವ ‘ಆರಗ ಜ್ಞಾನೇಂದ್ರ’ ನೆಮ್ಮದಿ ಸುದ್ದಿ ನೀಡಿದ್ದು, ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಬಗ್ಗೆ ಆತಂಕ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ, ಎಂದರು.

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದೆ. ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂಬುದನ್ನು ಸಚಿವರು, ನೆನಪಿಸಿದರು.

ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದು ಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕ ದಲ್ಲಿದೆ. ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು, ಬೆಳೆಗಾರರಿಗೆ, ಯಾವುದೇ ಗೊಂದಲ ಆತಂಕ ಬೇಡ, ಎಂದು ಸಚಿವರು, ಅಭಯ ನೀಡಿದ್ದಾರೆ.

ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು, ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...