Wednesday, February 4, 2026
Wednesday, February 4, 2026

PFI ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆCFI ಅರ್ಜಿ ಸಲ್ಲಿಕೆ

Date:

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ.
ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸುತ್ತೇವೆ ಎಂದು ಪಿಎಫ್​ಐನ ಅಂಗಸಂಸ್ಥೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಘೋಷಿಸಿದೆ.

ಕೇಂದ್ರ ಸರ್ಕಾರದ ಸೂಚನೆಯಂತೆ ಭಾರತದಲ್ಲಿ ತಕ್ಷಣದಿಂದ ಸಂಘಟನೆಯ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸುತ್ತೇವೆ ಎಂದು ಸಿಎಫ್​ಐ ಹೇಳಿದೆ.

ಹತ್ತಾರು ವರ್ಷಗಳಿಂದ ನಾವು ವಿದ್ಯಾರ್ಥಿಗಳ ಜೊತೆಗೆ ಕೆಲಸ ಮಾಡುತ್ತಿದ್ದೆವು. ಪ್ರಜಾಸತ್ತಾತ್ಮಕ ಆಶಯ ಎತ್ತಿಹಿಡಿಯುವ, ಸಾಮಾಜಿಕ ಬದ್ಧತೆ, ಕಾಳಜಿ ಇರುವ ಯುವಜನರನ್ನು ರೂಪಿಸಲು ಯತ್ನಿಸುತ್ತಿದ್ದೆವು. ಪಿಎಫ್​ಐ ಮತ್ತು ಸಿಎಫ್​ಐ ವಿರುದ್ಧ ಕೇಂದ್ರ ಸರ್ಕಾರವು ಮಾಡಿರುವ ಎಲ್ಲ ಆರೋಪಗಳನ್ನು ನಿರಾಕರಿಸುತ್ತೇವೆ.

ನೆಲದ ಕಾನೂನಿನ ವಿರುದ್ಧ ಯಾವುದೇ ಕೆಲಸ ನಾವು ಮಾಡಿಲ್ಲ ಎಂದು ಸಿಎಫ್​ಐ ತಿಳಿಸಿದೆ. ಸಂಘಟನೆಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಬೇಡಿ. ಅಕಸ್ಮಾತ್ ಬೇರೆ ಯಾರಾದರೂ ಸಂಘಟನೆಯ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದರೆ ಅಂಥವರಿಂದ ನೀವು ದೂರ ಇರಿ ಎಂದು ಸಿಎಫ್​ಐ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದೆ.

ಈ ನಡುವೆ ಕೇರಳದ ಪಿಎಫ್​ಐ ಘಟಕವನ್ನು ವಿಸರ್ಸಿಸಲಾಗಿದೆ. ಪಿಎಫ್​ಐ ಹೆಸರಿನಲ್ಲಿ ನಡೆಯುತ್ತಿದ್ದ ಎಲ್ಲ ರಾಜಕೀಯ ಮತ್ತು ಸಂಘಟನಾತ್ಮಕ ಚಟುವಟಿಕೆ ನಿಲ್ಲಿಸುವಂತೆ ಪಿಎಫ್​ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎ.ಅಬ್ದುಲ್ ಸತ್ತಾರ್ ಕರೆ ನೀಡಿದ್ದಾರೆ ಎನ್ನುವ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಆದರೆ ಪಿಎಫ್​ಐನ ಯಾವುದೇ ಪದಾಧಿಕಾರಿ ಈ ಪತ್ರವನ್ನು ನಿರಾಕರಿಸಿಲ್ಲ. ಪಿಎಫ್​ಐ ವಿಸರ್ಜನೆಯಾಗಿದೆ ಎಂದು ಪ್ರಶ್ನಾರ್ಥಕ ಚಿಹ್ನೆಯ ಶೀರ್ಷಿಕೆಯೊಂದಿಗೆ ‘ದಿ ಹಿಂದೂ’ ಜಾಲತಾಣವು ವರದಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...