Tuesday, March 24, 2026
Tuesday, March 24, 2026

PFI ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆCFI ಅರ್ಜಿ ಸಲ್ಲಿಕೆ

Date:

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ.
ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸುತ್ತೇವೆ ಎಂದು ಪಿಎಫ್​ಐನ ಅಂಗಸಂಸ್ಥೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಘೋಷಿಸಿದೆ.

ಕೇಂದ್ರ ಸರ್ಕಾರದ ಸೂಚನೆಯಂತೆ ಭಾರತದಲ್ಲಿ ತಕ್ಷಣದಿಂದ ಸಂಘಟನೆಯ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸುತ್ತೇವೆ ಎಂದು ಸಿಎಫ್​ಐ ಹೇಳಿದೆ.

ಹತ್ತಾರು ವರ್ಷಗಳಿಂದ ನಾವು ವಿದ್ಯಾರ್ಥಿಗಳ ಜೊತೆಗೆ ಕೆಲಸ ಮಾಡುತ್ತಿದ್ದೆವು. ಪ್ರಜಾಸತ್ತಾತ್ಮಕ ಆಶಯ ಎತ್ತಿಹಿಡಿಯುವ, ಸಾಮಾಜಿಕ ಬದ್ಧತೆ, ಕಾಳಜಿ ಇರುವ ಯುವಜನರನ್ನು ರೂಪಿಸಲು ಯತ್ನಿಸುತ್ತಿದ್ದೆವು. ಪಿಎಫ್​ಐ ಮತ್ತು ಸಿಎಫ್​ಐ ವಿರುದ್ಧ ಕೇಂದ್ರ ಸರ್ಕಾರವು ಮಾಡಿರುವ ಎಲ್ಲ ಆರೋಪಗಳನ್ನು ನಿರಾಕರಿಸುತ್ತೇವೆ.

ನೆಲದ ಕಾನೂನಿನ ವಿರುದ್ಧ ಯಾವುದೇ ಕೆಲಸ ನಾವು ಮಾಡಿಲ್ಲ ಎಂದು ಸಿಎಫ್​ಐ ತಿಳಿಸಿದೆ. ಸಂಘಟನೆಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಬೇಡಿ. ಅಕಸ್ಮಾತ್ ಬೇರೆ ಯಾರಾದರೂ ಸಂಘಟನೆಯ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದರೆ ಅಂಥವರಿಂದ ನೀವು ದೂರ ಇರಿ ಎಂದು ಸಿಎಫ್​ಐ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದೆ.

ಈ ನಡುವೆ ಕೇರಳದ ಪಿಎಫ್​ಐ ಘಟಕವನ್ನು ವಿಸರ್ಸಿಸಲಾಗಿದೆ. ಪಿಎಫ್​ಐ ಹೆಸರಿನಲ್ಲಿ ನಡೆಯುತ್ತಿದ್ದ ಎಲ್ಲ ರಾಜಕೀಯ ಮತ್ತು ಸಂಘಟನಾತ್ಮಕ ಚಟುವಟಿಕೆ ನಿಲ್ಲಿಸುವಂತೆ ಪಿಎಫ್​ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎ.ಅಬ್ದುಲ್ ಸತ್ತಾರ್ ಕರೆ ನೀಡಿದ್ದಾರೆ ಎನ್ನುವ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಆದರೆ ಪಿಎಫ್​ಐನ ಯಾವುದೇ ಪದಾಧಿಕಾರಿ ಈ ಪತ್ರವನ್ನು ನಿರಾಕರಿಸಿಲ್ಲ. ಪಿಎಫ್​ಐ ವಿಸರ್ಜನೆಯಾಗಿದೆ ಎಂದು ಪ್ರಶ್ನಾರ್ಥಕ ಚಿಹ್ನೆಯ ಶೀರ್ಷಿಕೆಯೊಂದಿಗೆ ‘ದಿ ಹಿಂದೂ’ ಜಾಲತಾಣವು ವರದಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...