Sunday, August 23, 2026
Sunday, August 23, 2026

ಜನಪ್ರಿಯ ಮನೋರೋಗ ತಜ್ಞ ಡಾ.ಚಂದ್ರಶೇಖರ್ ಗೆ ಮಹಾತ್ಮಗಾಂಧಿ ಸೇವಾ ಪ್ರಶಸ್ತಿ

Date:

ಸುಪ್ರಸಿದ್ಧ ಮನೋರೋಗ ತಜ್ಞ ಡಾ ಸಿ ಆರ್ ಚಂದ್ರಶೇಖರ್ ಅವರಿಗೆ 2022 ನೇ ವರ್ಷದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎ ವಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ನಗರದ ಗಾಂಧೀ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೋರೋಗ ತಜ್ಞ ಡಾ ಸಿ ಆರ್ ಚಂದ್ರಶೇಖರ್ ಅವರಿಗೆ ಐದು ಲಕ್ಷ ರೂಪಾಯಿ ನಗದು ಒಳಗೊಂಡ ರಾಜ್ಯ ಸರ್ಕಾರದ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ರಾಷ್ಟ್ರೀಯ ಮಾನಸಿಕ ಮತ್ತು ನರರೋಗಗಳ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯಲ್ಲಿ 45 ಕ್ಕೂ ಹೆಚ್ಚು ವರ್ಷಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿರುವ ಡಾ.ಸಿ.ಆರ್. ಚಂದ್ರಶೇಖರ್ ಅವರು 50,000 ಕ್ಕೂ ಹೆಚ್ಚು ಜನರಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ.

ಇದಲ್ಲದೇ, ಡಾ. ಸಿ. ಆರ್. ಚಂದ್ರಶೇಖರ್ ಅವರು 40,000 ಕ್ಕೂ ಹೆಚ್ಚು ಜನರಿಗೆ ಪತ್ರ ಮುಖೇನ ವೈದ್ಯಕೀಯ ಸಲಹೆ ಕೊಟ್ಟಿದ್ದಾರೆ.

ಅಂತೆಯೇ, 30,000 ಕ್ಕೂ ಹೆಚ್ಚು ಉಪನ್ಯಾಸಗಳನ್ನು ನೀಡಿದ್ದಾರೆ ಹಾಗೂ 20,000 ಕ್ಕೂ ಹೆಚ್ಚು ಜನರಿಗೆ ಆಪ್ತ ಸಮಾಲೋಚಕರ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...