Sunday, August 2, 2026
Sunday, August 2, 2026

ಮಹಾರಾಷ್ಟ್ರ ಅಸ್ಪತ್ರೆ: ಅಗ್ನಿ ಅನಾಹುತ.

Date:

ಮಹಾರಾಷ್ಟ್ರದಲ್ಲಿನ ಅಹ್ಮದ್ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ. ಈ ಅಗ್ನಿ ಅವಗಢದಲ್ಲಿ 11 ರೋಗಿಗಳು ಸಜೀವ ದಹನವಾಗಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಜಿಲ್ಲಾಸ್ಪತ್ರೆಯ ಐಸಿಯು ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೃತರಲ್ಲಿ ಹೆಚ್ಚಾಗಿ ಹಿರಿಯ ನಾಗರಿಕರ ಇದು ಕೋವಿಡ್ ಸೋಂಕಿನಿಂದ ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಐಸಿಯುನಲ್ಲಿ 20 ಜನ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಗ್ನಿ ಅವಘಡ ಸಂಭವಿಸಿದ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುವ ಅಷ್ಟರಲ್ಲಿ ಅಗ್ನಿ ಕೆನ್ನಾಲಿಗೆಗೆ ಹತ್ತು ಜನ ಬಲಿಯಾಗಿದ್ದು. ಅದರಲ್ಲಿ ಕೆಲವರು ಉಸಿರುಗಟ್ಟಿ ಮೃತ ಪಟ್ಟಿದ್ದರು. ಬೆಂಕಿ ಕಾಣಿಸಿಕೊಂಡ ಕೂಡಲೇ ಐಸಿಯುನಲ್ಲಿದ್ದ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಇಂಧನ ಸಚಿವ ನಿತಿನ್ ರಾವುತ್ ಆದೇಶಿಸಿದ್ದಾರೆ. ಅಗ್ನಿದುರಂತಕ್ಕೆ ನಿರ್ಲಕ್ಷ ಕಾರಣವೆಂದು ತಿಳಿದು ಬಂದರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘಟನೆಯಲ್ಲಿ ವೃತ್ತ ಪಟ್ಟವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಹಾಗೂ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...