Thursday, December 18, 2025
Thursday, December 18, 2025

ಸಮಾಜ ಸೇವೆಗೆ ಸ್ಪೂರ್ತಿ- ಪುನೀತ್

Date:

ಪುನೀತ್ ಅವರು 46 ವರ್ಷಗಳ ಕಾಲ ಬದುಕಿದ್ದರು ಅವರು ಮಾಡಿದ ಸಾಧನೆ ಬಹುದೊಡ್ಡದು. ಅನೇಕ ಸದಭಿರುಚಿ ಸಿನಿಮಾಗಳನ್ನು ನೀಡುವ ಮೂಲಕ ಅಭಿಮಾನಿಗಳ ಹೃದಯಗಳಲ್ಲಿ ಮನೆ ಮಾಡಿದ್ದಾರೆ. ಅವರು ತಮ್ಮ ಜೀವನದಲ್ಲಿ ರೂಡಿಸಿಕೊಂಡಿದ್ದ ಮೌಲ್ಯಗಳು ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ಶಿವಮೊಗ್ಗ ಬಸವ ಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅವರು ಹೇಳಿದ್ದಾರೆ.
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ “ಅಪ್ಪು- ಅಮರ ಪುನೀತ್ ರಾಜಕುಮಾರ್”ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಪ್ಪು ಅಭಿಮಾನಿಗಳ ಹೃದಯದಲ್ಲಿ ಈಗಲೂ ಚಿರಸ್ಥಾಯಿಯಾಗಿದ್ದಾರೆ. ಇದಕ್ಕೆ ಕಾರಣ ಅವರ ಪರಿಪೂರ್ಣ ವ್ಯಕ್ತಿತ್ವ ಎಂದು ಅವರು ತಿಳಿಸಿದರು.
ಎಂಡೋಸಲ್ಫಾನ್ ಸಂತ್ರಸ್ತರ ಪರ ದನಿಯತ್ತಿದ್ದರು.ಆ ಮೂಲಕ ಪುನೀತ್ ಅವರು ಸರ್ಕಾರ ಮತ್ತು ಸಂಬಂಧಪಟ್ಟ ಕಂಪನಿಯವರು ಪರಿಹಾರ ನೀಡುವಷ್ಟರ ಮಟ್ಟಿಗೆ ಹೋರಾಟವನ್ನು ರೂಪಿಸಿದ್ದರು. ಇದು ಅವರಲ್ಲಿ ಸಮಾಜದ ಪರವಾಗಿದ್ದ ಬದ್ಧತೆಯ ಪ್ರತೀಕ ಎಂದರು.
ಕಾರ್ಯಕ್ರಮದಲ್ಲಿ ಗೋಣಿಬೀಡು ಶೀಲ ಸಂಪಾದನಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸಾನಿಧ್ಯ ವಹಿಸಿದ್ದರು.
ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರು ತಮ್ಮ ಗಾಯನದ ಮೂಲಕ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸಿದರು. ಗಾಯಕರಾದ ಋತ್ವಿಕ್ ಮುರುಳಿಧರ್, ಗಾಯಕಿ ವಿದುಷಿ ಸುರೇಖಾ ಹೆಗಡೆ, ಚಾರ್ವಿ ಮುರುಳಿಧರ್, ಎಸ್.ಪಿ. ವಿಶಾಲ್, ಸೂಡಾ ಮಾಜಿ ಅಧ್ಯಕ್ಷ ರಮೇಶ್, ಸದ್ಭಾವನಾ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ್, ನಿರ್ಮಲಾ ಕಾಶಿ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...