Wednesday, December 17, 2025
Wednesday, December 17, 2025

ಮಾಲಿನ್ಯಯುಕ್ತ ದೆಹಲಿ, ಕೋವಿಡ್ ಆತಂಕದಲ್ಲಿ

Date:

ದೀಪಾವಳಿ ಹಿನ್ನೆಲೆಯಲ್ಲಿ, ದೇಶದ ಹಲವು ನಗರಗಳಲ್ಲಿ ಮಿತಿಮೀರಿದ ವಾಯು ಮಾಲಿನ್ಯದಿಂದ ಕೋವಿಡ್ ಸಂಖ್ಯೆ ಹೆಚ್ಚಳವಾಗುವ ಕಾರಣದ ಬಗ್ಗೆ ವೈದ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.

ಚಳಿಗಾಲ, ವಿಷಗಾಳಿ ಮತ್ತು ಕೋರೋನಾ ಬಾಧೆಗಳಿಂದ ದೇಶದಾದ್ಯಂತ ಶ್ವಾಸ ಸಂಬಂಧಿತ ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವ ಆತಂಕವನ್ನು ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ವ್ಯಕ್ತಪಡಿಸಿದ್ದಾರೆ.
“ಹಲವು ಜನರಲ್ಲಿ ಅಲರ್ಜಿಯ ಕೆಮ್ಮು, ಅಸ್ತಮಾ, ಸಿ.ಓ.ಪಿ.ಡಿ ಮತ್ತು ಇತರ ಶ್ವಾಸಕೋಶ ಸಂಬಂಧಿತ ಅನಾರೋಗ್ಯಗಳು ಗೌಪ್ಯವಾಗಿರುತ್ತದೆ. ಹೊರಗಿನ ವಾತಾವರಣದ ಪ್ರೇರಣೆ ಮೇಲೆ ಸಮಸ್ಯೆಗಳು ಉದ್ಭವಿಸಿ ಕೊಂಡು ಜನರನ್ನು ಬಾಧಿಸಲಾರಂಭಿಸುತ್ತದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ನೈಜುಲೇಜರ್ ಅಥವಾ ಇನ್ಹೇಲರ್ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ರೀತಿ ದುರ್ಬಲ ಶ್ವಾಸಕೋಶ ಹೊಂದಿರುವವರಿಗೆ ಕೋರೋನಾ ಸೋಂಕು ತಗಲಿ ಮರಣ ಹೊಂದುವ ಅಪಾಯ ಹೆಚ್ಚಿದೆ” ಎಂದು ಗುಲೇರಿಯಾ ತಿಳಿಸಿದ್ದಾರೆ.

ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ವಾಯುಮಾಲಿನ್ಯ ಮಿತಿಮೀರಿದ ಸಂದರ್ಭದಲ್ಲಿ, ಮೊದಲಿಗೆ ಮಕ್ಕಳು ತೊಂದರೆಗೊಳಗಾಗುತ್ತಾರೆ. ಚಿಕಿತ್ಸೆ ವಾರ್ಡಗಳಿಗೆ ಹೆಚ್ಚು ಪ್ರಮಾಣದಲ್ಲಿ ಮಕ್ಕಳು ಉಸಿರಾಟ ಸಮಸ್ಯೆ, ದೀರ್ಘಕಾಲದ ಶೀತ -ಕೆಮ್ಮು ಸಮಸ್ಯೆಗಳಿಂದಾಗಿ ದಾಖಲಾಗುತ್ತಾರೆ. ಹೀಗಾಗಿ ಮಕ್ಕಳು ಹೆಚ್ಚು ಜಾಗೃತರಾಗಿರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬೆಳಿಗ್ಗಿನ ವೇಳೆಯಲ್ಲಿ ವಾಹನದ ಓಡಾಟ ಹೆಚ್ಚಾಗಿರುವ ಕಾರಣ ಜನರ ಓಡಾಟ ಕಡಿಮೆಗೊಳಿಸುವುದು ಉತ್ತಮ ಎಂದು ಗುಲೇರಿಯಾ ಅವರು ಸುದ್ದಿ ಸಂಸ್ಥೆಯೊಂದರ ಸಂದರ್ಶನದಲ್ಲಿ ತಿಳಿಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...