Saturday, April 4, 2026
Saturday, April 4, 2026

ಡ್ರೋನ್ ಮೂಲಕ ಕೊಲ್ಲುವುದು ಹೇಡಿತನ – ಕಧಿಮಿ

Date:

ಡ್ರೋನ್ ಮೂಲಕ ಇರಾಕ್ ಪ್ರಧಾನಿ ಮುಸ್ತಾಫಾ ಅಲ್ ಕಧಿಮಿ ಅವರ ಹತ್ಯೆಗೆ ಸಂಚು ರೂಪಿಸಿ ಪ್ರಧಾನಿ ನಿವಾಸದ ಮೇಲೆ ಧಾಳಿ ನಡೆಸಲಾಗಿದೆ.

ಈ ಧಾಳಿ ವಿಫಲವಾಗಿದ್ದು, ಪ್ರಧಾನಿ ಅಲ್ ಕಧಿಮಿ ಅವರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ಇರಾಕ್ ಸಂಸತ್ತಿಗೆ ನಡೆದಿದ್ದ ಸಾರ್ವತ್ರಿಕ ಚುನಾವಣೆಯ ಫಲಿತಾಂಶವನ್ನು ಒಪ್ಪಿಕೊಳ್ಳಲು ಉಗ್ರ ಸಂಘಟನೆಯು ನಿರಾಕರಿಸಿತ್ತು. ಈ ಧಾಳಿಯಿಂದಾಗಿ ಇರಾಕ್ ದೇಶದಲ್ಲಿ ಉದ್ಭವಿಸಿರುವ ಅನಿಶ್ಚಿತ ಮತ್ತು ಆತಂಕದ ಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ.ಈ ಡ್ರೋನ್ ಧಾಳಿಯಲ್ಲಿ ಏಳು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಇರಾಕ್ ನ ಇಬ್ಬರು ಅಧಿಕಾರಿಗಳು ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಈ ಧಾಳಿಯ ಬಳಿಕ ಪ್ರಧಾನಿ ಮುಸ್ತಾಫಾ ಅಲ್ ಕಧಿಮಿ ಅವರು ‘ನಾನು ನನ್ನ ಜನರ ನಡುವೆ ಕ್ಷೇಮದಿಂದ ಇದ್ದೇನೆ. ದೇವರಿಗೆ ಕೃತಜ್ಞತೆಗಳು’ ಎಂದು ಟ್ವೀಟ್ ಮಾಡಿದ್ದಾರೆ.

ಇರಾಕ್ ನ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು ‘ಹೇಡಿತನದ ರಾಕೆಟ್ ಮತ್ತು ಡ್ರೋನ್ ಅನ್ನು ಬಳಸಿ ಧಾಳಿ ನಡೆಸುವುದರಿಂದ ನಾಡು ಮತ್ತು ಭವಿಷ್ಯವನ್ನು ಕಟ್ಟಲಾಗದು’ ಎಂದು ಪ್ರತಿಪಾದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...