Friday, March 20, 2026
Friday, March 20, 2026

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ

Date:

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ “ತುಟ್ಟಿ ಭತ್ಯೆ’ಯನ್ನು ಶೇ.27.25ರಿಂದ 31ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಇದರಿಂದ ಪ್ರಸಕ್ತ ವರ್ಷದ ತುಟ್ಟಿ ಭತ್ಯೆಯಲ್ಲಿ ಶೇ.3.75ರಷ್ಟು ಏರಿಕೆ ಆಗಲಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2022ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರುವಂತೆ ಮೂಲ ವೇತನದ ಶೇ.27.25ರಿಂದ ಶೇ.31ಕ್ಕೆ ಪರಿಷ್ಕರಿಸಿ ತುಟ್ಟಿ ಭತ್ಯೆ ದರಗಳನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.
ಯುಜಿಸಿ, ಎಐಸಿಟಿಇ, ಐಸಿಎಎಆರ್‌ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಈ ಆದೇಶ ಅನ್ವಯಿಸುತ್ತದೆ.

ಸರ್ಕಾರದ ಮತ್ತು ಜಿಲ್ಲಾ ಪಂಚಾಯಿತಿಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ.

ಯುಜಿಸಿ, ಎಐಸಿಟಿಇ, ಐಸಿಎಎಆರ್‌, ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...

Breaking News ಮೃಗಾಲಯದಲ್ಲಿ ನೀರಾನೆ ದಾಳಿಗೆ ಡಾ.ಸಮೀಕ್ಷಾ ರೆಡ್ಡಿ‌ ಬಲಿ. ಶಾಸಕ ಚೆನ್ನಿ ಸಂತಾಪ.

Breaking News ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಕರ್ತವ್ಯನಿರತರಾಗಿದ್ದ ಯುವ ಪಶುವೈದ್ಯೆ ಡಾ....

Ugadi ನಮ್ಮೂರಿನ ಯುಗಾದಿ.ಒಂದು ನೆನಪು…ಲೇ: ಎನ್.ಎಸ್.ಕುಮಾರ್.ನಿವೃತ್ತ ನಿರ್ದೇಶಕರು.( ಶಿಕ್ಷಣ ಇಲಾಖೆ).ಶಿವಮೊಗ್ಗ

Ugadi ಹಬ್ಬ ಎಂದರೆ ಎಲ್ಲರಿಗೂ ಸಡಗರ ಸಂಭ್ರಮ ಅದರಲ್ಲೂ ನಮ್ಮೂರಿನ ಹಬ್ಬದ...

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...