Wednesday, October 2, 2024
Wednesday, October 2, 2024

ಸರ್ಕಾರದ ಮರಳು ನೀತಿ ಇನ್ನಷ್ಟು ಸರಳ

Date:

ಸರ್ಕಾರಿ ಏಜೆನ್ಸಿ ಗಳಾದ ಎಚ್ ಜಿಎಂಎಲ್ ಮತ್ತು ಕರ್ನಾಟಕ ರಾಜ್ಯ ಖನಿಜಗಳ ನಿಗಮ ಮರಳು ಗಣಿಗಾರಿಕೆ ಮಾಡಿ ಮಾರಾಟ ಮಾಡಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದ್ದಾರೆ.
ನದಿ, ತೊರೆ, ಹಳ್ಳ, ಕೆರೆ ಜಲಾಶಯಗಳ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಿ, ಅಗ್ಗದ ದರದಲ್ಲಿ ಗ್ರಾಹಕರಿಗೆ ಮರಳು ಪೂರೈಕೆ ಮಾಡುವ ಹೊಸ ಮರಳು ನೀತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 50 ಕೋಟಿ ರೂಪಾಯಿಗೂ ಮೇಲ್ಪಟ್ಟ ಟೆಂಡರ್ ಗಳು ಮತ್ತು ಅವುಗಳ ಅಂದಾಜುಗಳ ಪೂರ್ವ ಪರಿಶೀಲನೆ ನಡೆಸಬೇಕಿದೆ. ಅದಕ್ಕೆ ಒಪ್ಪಿಗೆ ಪ್ರಕ್ರಿಯೆ ನಡೆಸಲು ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ.
ಟೆಂಡರ್ ಪ್ರಕ್ರಿಯೆಯಲ್ಲಿ ಇನ್ನಷ್ಟು ಪಾರದರ್ಶಕತೆ ತರಲು ಮತ್ತು ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ನಿರ್ಮಾಣ ಕಾಮಗಾರಿಗಳು, ಸರಕು ಮತ್ತು ಸೇವೆಗಳ ಸಂಗ್ರಹಣೆಯ ಟೆಂಡರ್ ಹಾಗೂ ಅಂದಾಜುಗಳನ್ನು ನ್ಯಾಯಮೂರ್ತಿ ಅಧ್ಯಕ್ಷತೆಯ ಸಮಿತಿಯೇ ಪರಿಶೀಲಿಸಿ ಅಂತಿಮಗೊಳಿಸುತ್ತದೆ. ಸಮಿತಿಯ ಒಪ್ಪಿಗೆಯ ಬಳಿಕ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ಗ್ರಾಮೀಣ ವಸತಿ ಯೋಜನೆಗಳಿಗೆ ಮತ್ತು ಗ್ರಾಮೀಣ ಜನರು ಮನೆ ಕಟ್ಟಿಕೊಳ್ಳಲು ರಿಯಾಯಿತಿ ದರದಲ್ಲಿ ಮರಳು ಪೂರೈಕೆ ಮಾಡಲು ನೀತಿಯಲ್ಲಿ ಅನುಮತಿ ನೀಡಲಾಗಿದೆ. ನದಿಯಲ್ಲಿ ಮುಳುಗಿ ಮರಳು ತೆಗೆಯುವ ಪದ್ಧತಿ ದಕ್ಷಿಣ ಕನ್ನಡದಲ್ಲಿ ಇತ್ತು. ಅದಕ್ಕೆ ಅವಕಾಶ ನೀಡಲಾಗಿದೆ. ಆದರೆ, ಇದಕ್ಕೆ ಯಾವುದೇ ರೀತಿಯ ಯಂತ್ರಗಳನ್ನು ಬಳಸುವಂತಿಲ್ಲ. ಸ್ಥಳೀಯರು ತಮ್ಮ ಮನೆಗಳನ್ನು ಕಟ್ಟಿಕೊಳ್ಳಲು ಈ ರೀತಿಯಲ್ಲಿ ಮರಳು ತೆಗೆಯಬಹುದಾಗಿದೆ. ಪರಿಸರಕ್ಕೆ ಹಾನಿಯಾಗುವಂತೆ ಮರಳು ತೆಗೆಯುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ಈ ಕ್ರಮ ಸ್ವಾಗತಾರ್ಹವಾಗಿದೆ.
ಜನ ಮನೆ ಕಟ್ಟುವ ಆತುರದಲ್ಲಿ ನದಿ ಪಾತ್ರದೊಳಗೆ ಎಲ್ಲೆಂದರಲ್ಲಿ ಮರಳು ತೆಗೆಯುವ ಯತ್ನಕ್ಕೆ ತೊಡಗುತ್ತಾರೆ. ಜನರ ಜೀವಹಾನಿಯಾಗದಂತಹ ಸೂಕ್ತ ಮರಳು ತೆಗೆಯುವ ಸ್ಥಳಗಳನ್ನ ಸರ್ಕಾರವೇ ಗುರುತಿಸುವುದು ಒಳ್ಳೆಯದು. ಅಂತಹ ತಾಣಗಳಲ್ಲಿ ಮುನ್ನೆಚ್ಚರಿಕೆಯಾಗಿ ಅಗ್ನಿ ಶಾಮಕ ದಳದ ವ್ಯವಸ್ಥೆ ಮಾಡುವುದು ಬಹಳ ಸೂಕ್ತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...