ಚಿತ್ರಕಲಾ ಕ್ಷೇತ್ರದಲ್ಲಿ ಎಲೆಮರೆಯ ಕಾಯಿಯಂತೆ ಸಾಧನೆ ಮಾಡುತ್ತಿರುವ ಕಲಾವಿದರನ್ನು ಗುರುತಿಸಲು ಕರ್ನಾಟಕ ಲಲಿತಕಲಾ ಅಕಾಡೆಮಿಯು ‘ವರ್ಣಶ್ರೀ ಪ್ರಶಸ್ತಿ’ ಸ್ಥಾಪಿಸಿದ್ದು, 2021-22ನೇ ಸಾಲಿನ ಪ್ರಶಸ್ತಿಗೆ 10 ಕಲಾವಿದರು ಆಯ್ಕೆಯಾಗಿದ್ದರು.
ಮಂಗಳೂರಿನ ವೀಣಾ ಶ್ರೀನಿವಾಸನ್, ಬಾಗಲಕೋಟೆಯ ಪರಮೇಶ ಜೋಳದ, ರಾಯಚೂರಿನ ಪಿ.ಎ.ಬಿ. ಈಶ್ವರ, ಪುಣೆಯ ಕುಡಲಯ್ಯಾ ಹಿರೇಮಠ, ತುಮಕೂರಿನ ಅಶೋಕ ಕಲ್ಲಶೆಟ್ಟಿ, ವಿಜಯಪುರದ ನಂದಬಸಪ್ಪ ವಾಡೆ, ರಾಮನಗರದ ಕೆ.ಜಿ. ಲಿಂಗದೇವರು, ಮಡಿಕೇರಿಯ ಮಹೇಶ ಬಿ., ಹುಬ್ಬಳ್ಳಿಯ ಶಕುಂತಲಾ ವರ್ಣೇಕರ ಹಾಗೂ ಬಳ್ಳಾರಿಯ ಮಂಜುನಾಥ ಜಿ. ಅವರು ‘ವರ್ಣಶ್ರೀ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಒಳಗೊಂಡಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಆರ್. ಚಂದ್ರಶೇಖರ್ ತಿಳಿಸಿದ್ದಾರೆ.