Thursday, August 13, 2026
Thursday, August 13, 2026

ಅಡಕೆ ಬೆಳೆ ವಿಮೆ ದಕ್ಷಿಣ ಕನ್ನಡದಲ್ಲೇ ಅಧಿಕ ನೋಂದಣಿ

Date:

ಹವಾಮಾನ ಆಧರಿತ ವಿಮಾ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ನೆರವಿಗೆ ಬಂದಿದ್ದು, ಇಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.

ಅತಿವೃಷ್ಟಿ, ಕೊಳೆರೋಗ, ನಳ್ಳಿ (ಎಳೆ ಅಡಿಕೆ) ಉದುರುವುದು ಇತ್ಯಾದಿ ಸಮಸ್ಯೆಗಳು ಜಿಲ್ಲೆಯ ಅಡಿಕೆ ಕೃಷಿಕರನ್ನು ಬಾಧಿಸುತ್ತಿವೆ. ಬೇಸಗೆಯ ಕೊನೆಯಲ್ಲಿ ಬಿಸಿಲಿನ ಝಳಕ್ಕೆ ಎಳೆ ಅಡಿಕೆ ಉದು ರುವುದು, ಜೂನ್‌ -ಜುಲೈ ತಿಂಗಳ ಸತತ ತೀವ್ರ ಮಳೆಯಿಂದಾಗಿ ಕೊಳೆರೋಗ ಉಂಟಾಗುತ್ತದೆ.
2016-17ರಲ್ಲಿ ಈ ಯೋಜನೆ ಆರಂಭವಾದಾಗ ಜಿಲ್ಲೆಯ ರೈತರಿಗೆ ಅದರ ಪ್ರಯೋಜನದ ಅರಿವು ಅಷ್ಟಾಗಿ ಇರಲಿಲ್ಲ. ಬಳಿಕ ಮನದಟ್ಟಾಗತೊಡಗಿದ್ದು, ಮೂರು ವರ್ಷಗಳಿಂದ ನೋಂದಣಿ ಮಾಡಿಕೊಳ್ಳು ವವರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲೇ ಗರಿಷ್ಠ ವಿಮಾ ಮೊತ್ತವೂ ದ.ಕ. ಜಿಲ್ಲೆಯಲ್ಲೇ ವಿತರಣೆಯಾಗುತ್ತಿದೆ.
ಜಿಲ್ಲೆಯಲ್ಲಿ 2020-21 ಸಾಲಿ ನಲ್ಲಿ 100 ಕೋ.ರೂ. ಮೊತ್ತ ವಿಮಾ ರೂಪದಲ್ಲಿ ವಿತರಣೆಯಾಗಿದೆ, 2021-22ರ ಸಾಲಿನ ಮೊತ್ತ ಇನ್ನೂ ವಿತರಣೆ ಆಗಿಲ್ಲ, ಆದರೆ ಈ ವರ್ಷದ ಮೊತ್ತ 150 ಕೋಟಿ ರೂ. ಮೀರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಹವಾಮಾನ ಆಧರಿತ ವಿಮೆ ವ್ಯವಸ್ಥಿತ, ವೈಜ್ಞಾನಿಕ ಯೋಜನೆ. ಇದರಲ್ಲಿ ಮಳೆಯ ತೀವ್ರತೆ, ಮುಂದುವರಿದ ಮಳೆ ಮತ್ತು ತಾಪಮಾನ ಎಂಬ 3 ವಿಭಾಗಗಳಡಿ ನಷ್ಟ ಅಂದಾಜಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...