Friday, August 14, 2026
Friday, August 14, 2026

ನ್ಯಾ.ಸದಾಶಿವ ಆಯೋಗದ ವರದಿ ಪರಿಶೀಲಿಸಿ ಸೂಕ್ತ ಕ್ರಮ- ಬೊಮ್ಮಾಯಿ

Date:

ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ರಚಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಳಸಮುದಾಯಗಳಿಗೆ ಮೀಸಲಾತಿ ಪೂರ್ಣಪ್ರಮಾಣದಲ್ಲಿ ಮುಟ್ಟಿಲ್ಲ ಎಂದು ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಹೇಳಿದ್ದು, ಇವರಿಗೆ ನ್ಯಾಯ ಒದಗಿಸಲು ಕೂಲಂಕಷವಾಗಿ ಕಾನೂನಾತ್ಮಕ ಅಂಶಗಳನ್ನು ತಜ್ಞರು ಪರಿಶೀಲಿಸಿ, ಮುಂದೆ ಕ್ರಮ ತೆಗೆದುಕೊಳ್ಳಬಹುದೆಂದು ಹೇಳಿದ್ದಾರೆ. ಒಳಮೀಸಲಾತಿ ಬಗ್ಗೆ ಬಗ್ಗೆ ಅಧ್ಯಯನ ಮಾಡಿರುವ ಸದಾಶಿವ ಆಯೋಗದ ಪ್ರಮುಖ ಅಂಶಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅದಕ್ಕೂ ಮುನ್ನ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲಾ ಜಾತಿಗಳ ಹಿತರಕ್ಷಣೆ ಮಾಡುವ ಸಲುವಾಗಿ ಮತ್ತು ಒಳಮೀಸಲಾತಿಯಿಂದ ಪರಿಣಾಮ ಬೀರುವ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಇನ್ನು ಪರಿಶಿಷ್ಟ ಜಾತಿಯಲ್ಲಿರುವ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದು ಅಧಿಕೃತವಾಗಿ ಚರ್ಚೆ ಮಾಡಿ ಕೈಗೊಂಡಿರುವ ತೀರ್ಮಾನ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...