Sunday, October 6, 2024
Sunday, October 6, 2024

ನ್ಯಾ.ಸದಾಶಿವ ಆಯೋಗದ ವರದಿ ಪರಿಶೀಲಿಸಿ ಸೂಕ್ತ ಕ್ರಮ- ಬೊಮ್ಮಾಯಿ

Date:

ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ರಚಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಳಸಮುದಾಯಗಳಿಗೆ ಮೀಸಲಾತಿ ಪೂರ್ಣಪ್ರಮಾಣದಲ್ಲಿ ಮುಟ್ಟಿಲ್ಲ ಎಂದು ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಹೇಳಿದ್ದು, ಇವರಿಗೆ ನ್ಯಾಯ ಒದಗಿಸಲು ಕೂಲಂಕಷವಾಗಿ ಕಾನೂನಾತ್ಮಕ ಅಂಶಗಳನ್ನು ತಜ್ಞರು ಪರಿಶೀಲಿಸಿ, ಮುಂದೆ ಕ್ರಮ ತೆಗೆದುಕೊಳ್ಳಬಹುದೆಂದು ಹೇಳಿದ್ದಾರೆ. ಒಳಮೀಸಲಾತಿ ಬಗ್ಗೆ ಬಗ್ಗೆ ಅಧ್ಯಯನ ಮಾಡಿರುವ ಸದಾಶಿವ ಆಯೋಗದ ಪ್ರಮುಖ ಅಂಶಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅದಕ್ಕೂ ಮುನ್ನ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲಾ ಜಾತಿಗಳ ಹಿತರಕ್ಷಣೆ ಮಾಡುವ ಸಲುವಾಗಿ ಮತ್ತು ಒಳಮೀಸಲಾತಿಯಿಂದ ಪರಿಣಾಮ ಬೀರುವ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಇನ್ನು ಪರಿಶಿಷ್ಟ ಜಾತಿಯಲ್ಲಿರುವ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದು ಅಧಿಕೃತವಾಗಿ ಚರ್ಚೆ ಮಾಡಿ ಕೈಗೊಂಡಿರುವ ತೀರ್ಮಾನ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...