ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆ ಆರ್ಭಟ ಮುಂದುವರಿದಿದೆ. ಜೊತೆಗೆ ಮುಂದಿನ 48 ಗಂಟೆಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರೊಂದಿಗೆ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲಾ ರಾಜ್ಯಗಳಿಗೂ ತಟ್ಟಿದೆ.
ಸೋಮವಾರ ಉಡುಪಿ ಜಿಲ್ಲೆಯ ಹೆಬ್ರಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬೆಳಗಾವಿ ಜಿಲ್ಲೆಯ ಹೋಳಿನಗರಪುರ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಹಾಗೂ ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಹಾಗೂ ಹಾಸನದಲ್ಲಿ ನವೆಂಬರ್ 11 ಮತ್ತು 12 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ನೀಡಿದೆ.
ನವೆಂಬರ್ 9 ಮತ್ತು 10 ರಂದು ಕೆಲವು ಕಡೆ ಗುಡುಗು ಸಿಡಿಲಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತೆ ಮಳೆ… ಹಲವೆಡೆ ಯಲ್ಲೊ ಅಲರ್ಟ್
Date: