Friday, May 8, 2026
Friday, May 8, 2026

ದಲಿತರಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಅರ್ಥಪೂರ್ಣ

Date:

ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಕೇವಲ ಕಾನೂನು ತಂದರೆ ಸಾಲದು. ಅವರ ಉನ್ನತಿ ಖಾತ್ರಿಪಡಿಸಿಕೊಳ್ಳಲು ಜನರ ಮನಸ್ಥಿತಿ ಬದಲಾಗಬೇಕಿದೆ ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಪ್ರತಿಪಾದಿಸಿದರು.

ಕಾನ್ಪುರದ ನಾನಾರಾವ್‌ ಪಾರ್ಕ್‌ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ವಾಲ್ಮೀಕಿ ಸಮುದಾಯ ಬಹಳ ಹಿಂದುಳಿದಿದೆ.

ಸಮುದಾಯದ ಅಭಿವೃದ್ಧಿಗೆ ಸಂವಿಧಾನದಲ್ಲಿ ನಿಬಂಧನೆಗಳನ್ನು ಮಾಡಲಾಗಿದೆ. ಆದರೆ ಇದಕ್ಕಿಂತ ಮಿಗಿಲಾಗಿ ಜನರಲ್ಲಿ ಒಳಗೊಳ್ಳುವಿಕೆ ಭಾವನೆ ಮೂಡಬೇಕಿದೆ, ಎಂದರು.

ದಲಿತರ ಉದ್ಧಾರಕ್ಕಾಗಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಅನೇಕ ನಿಬಂಧನೆಗಳನ್ನು ತಂದರು. ಇದರಿಂದ ಎಲ್ಲರೊಂದಿಗೆ ಸಮನಾಗಿ ದಲಿತರು ಕೂರಬಹುದು. ಅವರಿಗೆ ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ನೀಡಲಾಗಿದೆ ಎಂದು ಅಂಬೇಡ್ಕರ್‌ ಹೇಳಿದರು. ಆದರೆ ಇದರೊಂದಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಹೆಚ್ಚು ಅರ್ಥಪೂರ್ಣ. ಕೇವಲ ಕಾನೂನುಗಳು ಸಾಲದು. ನಮ್ಮ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕಿದೆ. ಅವರ ಮನಸ್ಥಿತಿಯನ್ನು ಬದಲಿಸಬೇಕಿದೆ, ಎಂದು ಭಾಗವತ್‌ ಪ್ರತಿಪಾದಿಸಿದರು.

ದಲಿತ ಸಮುದಾಯಕ್ಕೆ ಸಾಮಾಜಿಕ ಸ್ವಾತಂತ್ರ್ಯ ದೊರಕಿಸಲು ಮತ್ತು ಸಾಮಾಜಿಕ ಸಾಮರಸ್ಯ ಹಾಗೂ ಒಳಗೊಳ್ಳುವಿಕೆ ಭಾವನೆ ಮೂಡಿಸಲು ಮತ್ತೂಬ್ಬ ಡಾ. ಸಾಹೇಬ್ ಶ್ರಮಿಸಿದರು, ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Backward Classes Welfare Department ಶುಲ್ಕ ಮರುಪಾವತಿ ಕಾರ್ಯಕ್ರಮದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ...

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...