Monday, December 15, 2025
Monday, December 15, 2025

ದಲಿತರಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಅರ್ಥಪೂರ್ಣ

Date:

ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಕೇವಲ ಕಾನೂನು ತಂದರೆ ಸಾಲದು. ಅವರ ಉನ್ನತಿ ಖಾತ್ರಿಪಡಿಸಿಕೊಳ್ಳಲು ಜನರ ಮನಸ್ಥಿತಿ ಬದಲಾಗಬೇಕಿದೆ ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಪ್ರತಿಪಾದಿಸಿದರು.

ಕಾನ್ಪುರದ ನಾನಾರಾವ್‌ ಪಾರ್ಕ್‌ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ವಾಲ್ಮೀಕಿ ಸಮುದಾಯ ಬಹಳ ಹಿಂದುಳಿದಿದೆ.

ಸಮುದಾಯದ ಅಭಿವೃದ್ಧಿಗೆ ಸಂವಿಧಾನದಲ್ಲಿ ನಿಬಂಧನೆಗಳನ್ನು ಮಾಡಲಾಗಿದೆ. ಆದರೆ ಇದಕ್ಕಿಂತ ಮಿಗಿಲಾಗಿ ಜನರಲ್ಲಿ ಒಳಗೊಳ್ಳುವಿಕೆ ಭಾವನೆ ಮೂಡಬೇಕಿದೆ, ಎಂದರು.

ದಲಿತರ ಉದ್ಧಾರಕ್ಕಾಗಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಅನೇಕ ನಿಬಂಧನೆಗಳನ್ನು ತಂದರು. ಇದರಿಂದ ಎಲ್ಲರೊಂದಿಗೆ ಸಮನಾಗಿ ದಲಿತರು ಕೂರಬಹುದು. ಅವರಿಗೆ ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ನೀಡಲಾಗಿದೆ ಎಂದು ಅಂಬೇಡ್ಕರ್‌ ಹೇಳಿದರು. ಆದರೆ ಇದರೊಂದಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಹೆಚ್ಚು ಅರ್ಥಪೂರ್ಣ. ಕೇವಲ ಕಾನೂನುಗಳು ಸಾಲದು. ನಮ್ಮ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕಿದೆ. ಅವರ ಮನಸ್ಥಿತಿಯನ್ನು ಬದಲಿಸಬೇಕಿದೆ, ಎಂದು ಭಾಗವತ್‌ ಪ್ರತಿಪಾದಿಸಿದರು.

ದಲಿತ ಸಮುದಾಯಕ್ಕೆ ಸಾಮಾಜಿಕ ಸ್ವಾತಂತ್ರ್ಯ ದೊರಕಿಸಲು ಮತ್ತು ಸಾಮಾಜಿಕ ಸಾಮರಸ್ಯ ಹಾಗೂ ಒಳಗೊಳ್ಳುವಿಕೆ ಭಾವನೆ ಮೂಡಿಸಲು ಮತ್ತೂಬ್ಬ ಡಾ. ಸಾಹೇಬ್ ಶ್ರಮಿಸಿದರು, ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...