Wednesday, March 25, 2026
Wednesday, March 25, 2026

ರಾಜ್ಯದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ- ಆರಗ ಜ್ಞಾನೇಂದ್ರ

Date:

ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಆಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದರು.

ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಕೇಂದ್ರದಿಂದ ಪತ್ರ ಬರೆದಿದೆ. ಹುಬ್ಬಳ್ಳಿ, ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಜಾಗ ಗುರುತಿಸುವ ಪ್ರಯತ್ನ ನಡೆದಿದೆ. ಶಿವಮೊಗ್ಗದಲ್ಲಿ ಎಫ್​ಎಸ್​ಎಲ್​​ ಲ್ಯಾಬ್ ಸ್ಥಾಪನೆ ಆಗಲಿದೆ ಎಂದು ತಿಳಿಸಿದರು.

ಭೂತಾನ್ ಚೀನಾ ಪಕ್ಕದಲ್ಲಿದೆ. ಕೆಲವೊಂದು ಕಾರಣಕ್ಕೆ ಅದರ ಜೊತೆ ವ್ಯಾಪಾರ ಮಾಡುವ ಅಗತ್ಯ ಇದೆ. ಸರ್ಕಾರ ಬದಲಾದಾಗ ಆ ದೇಶದೊಂದಿಗೆ ಮಾಡಿಕೊಂಡ ಒಪ್ಪಂದ ಬದಲಾಗುವುದಿಲ್ಲ. ಆ ದೇಶದಿಂದ ಕೇವಲ ಹಸಿ ಅಡಕೆ ಮಾತ್ರ ಬರಲಿದೆ. ಅದು ಸಮುದ್ರ ಮಾರ್ಗವಾಗಿ ಮಾತ್ರ ಬರಬೇಕಿದೆ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿಯಾಗಿ ಕೆಲವರು ರೈತರನ್ನು ಶೋಷಣೆ ಮಾಡಲು ಯತ್ನಿಸುತ್ತಿದ್ದಾರೆ. ಎಲೆ ಚುಕ್ಕಿ ರೋಗ ಸಹ ಅಡಕೆ ರೈತರಿಗೆ ಮಾರಕವಾಗುತ್ತಿದೆ. ಅದಕ್ಕಾಗಿ ಸರ್ಕಾರ 8 ಪರಿಹಾರ ನೀಡಲು ಮುಂದಾಗಿದೆ. ಇದರಿಂದ ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದರು.

ಅಗತ್ಯ ಬಿದ್ದರೆ ಪರಿಹಾರ ಪ್ರಮಾಣ ಹೆಚ್ಚಳಕ್ಕೆ ಸರ್ಕಾರ ಗಮನ ಹರಿಸಲಿದೆ. ಸಾಮಾನ್ಯ ಪೇದೆ ನೇಮಕ ಸಂಬಂಧ ವಯೋಮಿತಿ ಕಡಿಮೆ ಮಾಡಲು ಸಾಧ್ಯವಿಲ್ಲ. ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಗೆ ಏನೂ ನಷ್ಟವಿಲ್ಲ. ಉತ್ತರ ಭಾರತದಲ್ಲಿ ನೆಲೆಕಳೆದುಕೊಂಡಿರುವ ಕಾಂಗ್ರೆಸ್‌ ಇಲ್ಲಿ ತನ್ನ ಅಸ್ತಿತ್ವಕ್ಕೆ ಹುಡುಕಾಡುತ್ತಿದೆ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...