Sunday, August 23, 2026
Sunday, August 23, 2026

ನ್ಯಾ.ಪ್ರಸನ್ನ.ಬಿ.ವರಲೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ

Date:

ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಲೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸಿಜೆಐ ಯು.ಯು.ಲಲಿತ್ ನೇತೃತ್ವದಲ್ಲಿ ಸೆ.28ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪಿ.ಬಿ.ವರಲೆ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು.

ಇದೀಗ ರಾಷ್ಟ್ರಪತಿಗಳ ಆದೇಶಾನುಸಾರು ಪ್ರಸನ್ನ ಬಿ.ವರಲೆ ಅವರನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ರಾಜ್ಯ ಹೈಕೋರ್ಟ್‌ನ ಹಿಂದಿನ ಸಿಜೆ ರಿತುರಾಜ್ ಅವಸ್ಥಿ ಕಳೆದ ಜು.2ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ 1962ರ ಜೂ.23ರಂದು ಜನಿಸಿದ ಪ್ರಸನ್ನ ಬಿ.ವರಲೆ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲಾ ಮತ್ತು ಕಾನೂನು ಪದವಿ ಪಡೆದಿದ್ದಾರೆ.

1985ರ ಆ.12ರಂದು ವಕೀಲಿಕೆ ಆರಂಭಿಸಿದ ಅವರು ವಕೀಲರಾದ ಎಸ್.ಎಲ್. ಲೋಯಾ ಕಚೇರಿಗೆ ಸೇರಿ ಸಿವಿಲ್ ಮತ್ತು ಕ್ರಿಮಿನಲ್ ಕೇಸ್‌ಗಳನ್ನು ನಿರ್ವಹಿಸಿದರು. 1990ರಿಂದ 92ವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.

ಔರಂಗಾಬಾದ್ ಹೈಕೋರ್ಟ್ ಪೀಠದಲ್ಲಿ ಸಹಾಯಕ ಸರ್ಕಾರಿ ಪ್ಲೀಡರ್ ಹಾಗೂ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು, ಕೇಂದ್ರ ಸರ್ಕಾರದ ಪರ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. 2008ರ ಜು.18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಪ್ರಸನ್ನ ಬಿ. ವರಲೆ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...