Sunday, December 7, 2025
Sunday, December 7, 2025

ಮಹಿಳೆಯರ ಅಂಡರ್19 ಕ್ರಿಕೆಟ್ ಪಂದ್ಯಾವಳಿಗೆ ಶಿವಮೊಗ್ಗದ ಪ್ರತಿಭೆಗಳ ಆಯ್ಕೆ

Date:

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಶ್ರೀ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕದ ಹಿರಿಯ ಮಹಿಳಾ ಟಿ-20 ತಂಡವು ದಿನಾಂಕ: 11-10-2022 ರಿಂದ ಗುಜರಾತ್‍ನ ಸೂರತ್‍ನಲ್ಲಿ ನಡೆಯುವ ಪಂದ್ಯಾವಳಯಲ್ಲಿ ಭಾಗವಹಿಸುತ್ತಿದ್ದು, ಶಿವಮೊಗ್ಗದ ಪ್ರತಿಭಾನ್ವಿತ ಮಹಿಳಾ ಕ್ರಿಕೆಟ್ ಆಲ್‍ರೌಂಡರ್ ಆದ ಕು.ಅದಿತಿ ರಾಜೇಶ್ ಈ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಶ್ರಯದ ಹೈದರಾಬಾದ್‍ನಲ್ಲಿ ನಡೆಯಲಿರುವ ರಾಷ್ಟ್ರೀಯ 19 ವರ್ಷ ವಯೋಮಿತಿಯೊಳಗಿನ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ಕು.ಸಿ.ಜೆ.ನಿರ್ಮಿತಾ ಇವರು ಆಲ್‍ರೌಂಡರ್ ಆಗಿ ಆಯ್ಕೆಯಾಗಿರುತ್ತಾರೆ.

ಈ ಕ್ರೀಡಾಪಟುಗಳು ಪ್ರಸ್ತುತ ಡಿವಿಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಸಹ್ಯಾದ್ರಿ ಕೀಡಾಂಗಣದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಿವಮೊಗ್ಗದ ಕ್ರಿಕೆಟ್ ತರಬೇತುದಾರ ಪಿ.ವಿ.ನಾಗರಾಜ್ ಇವರ ಬಳಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಮಹಿಳಾ ಕ್ರಿಕೆಟ್ ಕ್ರೀಡೆಯಲ್ಲಿ ತರಬೇತಿ ಪಡೆಯಲು ಆಸಕ್ತಿ ಇರುವ ಬಾಲಕಿಯರು ಈ ತರಬೇತುದಾರರನ್ನು ಮೊ.ಸಂ: 9964599936 ಮೂಲಕ ಸಂಪರ್ಕಿಸಬಹುದು.

ಮಹಿಳಾ ಟಿ-20 ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ಈ ಪ್ರತಿಭಾವಂತ ಬಾಲಕಿಯರಿಗೆ ಕೆಎಸ್‍ಸಿಎ ಶಿವಮೊಗ್ಗ ವಲಯ ಸಂಚಾಲಕರಾದ ಡಿ.ಎಸ್.ಅರುಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಸಿಬ್ಬಂದಿ ವರ್ಗದವರು ಹಾಗೂ ಹಿರಿಯ, ಕಿರಿಯ ಕ್ರೀಡಾಪಟುಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...