Tuesday, February 3, 2026
Tuesday, February 3, 2026

ಹಿಜಾಬ್ ವಿವಾದ ಸದ್ಯಕ್ಕೆ ರಾಜ್ಯ ಹೈಕೋರ್ಟ್ ತೀರ್ಪನ್ನೇ ಊರ್ಜಿತಗೊಳಿಸಿರುವ ಸುಪ್ರೀಂ ಕೋರ್ಟ್

Date:

ಹಿಜಾಬ್ ವಿವಾದದ ಬಗ್ಗೆ ನ್ಯಾಯಾಧೀಶರು ವಿಭಜಿತ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರುತ್ತದೆ ಎಂದು ಕಾನೂನು ತಜ್ಞರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅನಂತರವಷ್ಟೇ ಸುಪ್ರೀಂಕೋರ್ಟ್​ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್​ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ.

ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಆದೇಶ ಯಥಾಸ್ಥಿತಿ ಮುಂದುವರಿಯಲಿದೆ. ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾನೂನು ತಜ್ಞರು ಹಾಗೂ ವಕೀಲರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂವಿಧಾನ, ವೈಯಕ್ತಿಕ ಕಾನೂನಿನ ಗಂಭೀರ ವಿಚಾರಣೆ ನಡೆಯುತ್ತಿದೆ. ನಮ್ಮದು ವೈವಿಧ್ಯಮಯ ಸಂಸ್ಕೃತಿ, ಭಾಷೆ, ಧರ್ಮಗಳ ದೇಶ. ಸರ್ಕಾರಕ್ಕೆ ತನ್ನದೇ ಆದ ಧರ್ಮ ಎಂಬುದಿಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಆಚರಣೆಯ ಹಕ್ಕಿದೆ. ಆದರೆ ಈ ಹಕ್ಕು ಪರಿಪೂರ್ಣ ಹಕ್ಕಲ್ಲ, ನಿರ್ಬಂಧಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಮಾರ್ಚ್ 15 ತೀರ್ಪು ಪ್ರಕಟಿಸಿದ್ದ ಹೈಕೋರ್ಟ್, ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಹಲವರು ಅರ್ಜಿ ಸಲ್ಲಿಸಿದ್ದರು.
‘ಪ್ರತಿಭಟನೆಗಳಿಂದ ಶಾಲೆ-ಕಾಲೇಜು ಮುಚ್ಚಿದ್ದು ಬೇಸರದ ಸಂಗತಿ.

ತರಗತಿಯಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕೇ ಎಂಬ ಪ್ರಶ್ನೆ ಕೇಳಿಕೊಂಡಿದ್ದ ಹೈಕೋರ್ಟ್, ಈ ಬಗ್ಗೆ ಆಳವಾದ ವಿಚಾರಣೆ ನಡೆಸುವ ಅಗತ್ಯವಿದೆ. ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ಪ್ರತಿಭಟನೆಗಳಿಂದ ಶಾಲೆ-ಕಾಲೇಜುಗಳು ಬಂದ್ ಆಗಬಾರದು ಎಂದು ಹೇಳಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...