Monday, February 2, 2026
Monday, February 2, 2026

ಪ್ರೊ ಕಬಡ್ಡಿ ಟೂರ್ನಿ ಬುಲ್ಸ್ ವಿರುದ್ಧ ವಾರಿಯರ್ಸ್ ವಿಜಯ

Date:

ಪಂದ್ಯದ ಆರಂಭದಲ್ಲಿ ಉತ್ತಮವಾಗಿ ಆಡಿದ ಬೆಂಗಳೂರು ಬುಲ್ಸ್‌ ತಂಡವನ್ನು ಬೆಂಗಾಲ್ ವಾರಿಯರ್ಸ್ ತಂಡವು ಕೊನೆಗೂ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಬುಲ್ಸ್ ತಂಡದ ಹ್ಯಾಟ್ರಿಕ್ ಜಯದ ಕನಸು ಕೈಗೂಡಲಿಲ್ಲ.

ಬೆಂಗಾಲ್ ತಂಡವು 42-33ರಿಂದ ಗೆದ್ದಿತು. ಬೆಂಗಳೂರು ತಂಡವು ಮೊದಲೆರಡು ಪಂದ್ಯಗಳಲ್ಲಿ ಜಯಿಸಿತ್ತು.

ತವರಿನ ಪ್ರೇಕ್ಷಕರ ಮುಂದೆ ಮೊದಲಾರ್ಧದದಲ್ಲಿಯೇ 14-15ರಿಂದ ಬೆಂಗಳೂರು ತಂಡವು ಹಿನ್ನಡೆ ಅನುಭವಿಸಿತ್ತು. ವಿರಾಮದ ನಂತರ ಬೆಂಗಳೂರು ತಂಡವು ತಿರುಗೇಟು ನೀಡುವ ನಿರೀಕ್ಷೆಯಲ್ಲಿದ್ದ ಪ್ರೇಕ್ಷಕರಿಗೆ ನಿರಾಶೆಯಾಯಿತು. ತಂಡದ ಭರತ್‌ (8) ಹಾಗೂ ವಿಕಾಶ್ ಖಂಡೋಲಾ (7) ಉತ್ತಮವಾಗಿ ಆಡಿದರು.

ಆದರೆ ಬೆಂಗಾಲ್ ತಂಡಕ್ಕೆ ನಾಯಕ ಮಣಿಂದರ್‌ ಸಿಂಗ್‌ (11) ಸೂಪರ್‌ ಟೆನ್‌ ರೇಡ್‌ಗಳ ಬಲದಿಂದ ಜಯ ಒಲಿಯಿತು. ತಂಡವು ಮೂರು ಪಂದ್ಯಗಳಲ್ಲಿ ಎರಡು ಜಯ ಹಾಗೂ ಒಂದರಲ್ಲಿ ಡ್ರಾ ಸಾಧಿಸಿದೆ. ಶ್ರೀಕಾಂತ್‌ ಜಾಧವ್‌ (6) ಹಾಗೂ ಗಿರೀಶ್‌ ಮಾರುತಿ (5) ಆಲ್‌ರೌಂಡ್ ಆಟವಾಡಿದರು.

ಆದರೆ ಬೆಂಗಾಲ್ ತಂಡದ ಪ್ರಮುಖ ಆಟಗಾರ ದೀಪಕ್‌ ಹೂಡಾ 10 ಬಾರಿ ದಾಳಿಗೆ ತೆರಳಿದರೂ ಒಂದು ಅಂಕ ಮಾತ್ರ ಗಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...